ಮಡಿಕೇರಿ, ಜೂ. ೧೪: ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ ೨೦೨೩ ಕಾನೂನು ಜಾರಿಗೊಳಿಸಲು ಕಾರಣರಾದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ಪ್ರತಿನಿಧಿಗಳು ವಿಧಾನಸೌಧದಲ್ಲಿ ಸನ್ಮಾನಿಸಿದರು.

ಸಂಘದ ಅಧ್ಯಕ್ಷ ರವಿ ಎಂ., ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಮುನಿರಾಜು, ವಿಜಯ್‌ಕುಮಾರ್, ಸದಸ್ಯರಾದ ಶಿವಕುಮಾರ್, ಮಹಮದ್ ಮಮ್ತಾಜ್, ಪ್ರಭಾಕರ್, ಸೈಯದ್ ನಾಜಿಮ್, ಪ್ರವೀಣ್ ಕುಮಾರ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.