ನಾಪೋಕ್ಲು, ಜೂ. ೧೩ : ಪಟ್ಟಣದಿಂದ ಕೊಡವ ಸಮಾಜಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತುರ್ತು ದುರಸ್ತಿಪಡಿಸಬೇಕಾದ ಅಗತ್ಯವಿದೆ. ರಸ್ತೆಯಲ್ಲಿ ಹೊಂಡಗಳಾಗಿದ್ದು ಕೆಸರುಮಯವಾಗಿದೆ. ವಾಹನಗಳ ಸಂಚಾರಕ್ಕೆ ತೊಡಕಾಗಿದೆ.

ನಾಪೋಕ್ಲು, ಕುರೂಳಿ, ಎಮ್ಮೆಮಾಡು ಸಂಪರ್ಕ ರಸ್ತೆಯಾಗಿದ್ದು, ಈ ವ್ಯಾಪ್ತಿಯ ಜನರಿಗೆ ಬಹುಪಯೋಗಿಯಾಗಿದೆ.

ಬೇಸಿಗೆ ಅವಧಿಯಲ್ಲಿ ರಸ್ತೆಯನ್ನು ದುರಸ್ತಿಪಡಿಸಬೇಕಿತ್ತು. ಇದೀಗ ಮಳೆಗಾಲ ಆರಂಭವಾಗಿದ್ದು, ಗುಂಡಿಗಳಲ್ಲಿ ಮಳೆ ನೀರು ನಿಂತು ರಸ್ತೆಯಲ್ಲಿ ಸಂಚರಿಸುವುದು ತ್ರಾಸದಾಯಕವಾಗಿದೆ. ಜೀವಪಾಯವಾಗುವ ಮೊದಲು ಸಂಬAಧಪಟ್ಟವರು ಶೀಘ್ರ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ರಸ್ತೆ ಗುಂಡಿ ಬಿದ್ದಿದ್ದು ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಸಂಬAಧಪಟ್ಟವರಲ್ಲಿ ಮಾತನಾಡಿ ಕೂಡಲೇ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ತಿಳಿಸಿದ್ದಾರೆ. - ದುಗ್ಗಳ ಸದಾನಂದ.