ಮಡಿಕೇರಿ, ಜೂ. ೧೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಗೊಂಡಿರುವ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಇದೀಗ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ತಾ. ೧೫ರಂದು (ನಾಳೆ) ಅಪರಾಹ್ನ ೧೨.೧೫ಕ್ಕೆ ಅಕಾಡೆಮಿ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೆ ಮುಂಚಿತವಾಗಿ ನೂತನ ಅಧ್ಯಕ್ಷರ ಆಯ್ಕೆಯನ್ನು ಸರಕಾರ ಪ್ರಕಟಿಸಿತ್ತು. ಆದರೆ ನಂತರದಲ್ಲಿ ಚುನಾವಣಾ ನೀತಿ ಸಂಹಿತೆ ಎದುರಾಗಿದ್ದರಿಂದ ಈತನಕ ಅಧಿಕಾರ ಸ್ವೀಕಾರ ನಡೆದಿರಲಿಲ್ಲ. ಇದಲ್ಲದೆ ಅಕಾಡೆಮಿಗೆ ನೂತನ ಸದಸ್ಯರ ನೇಮಕಾತಿಯೂ ಇನ್ನಷ್ಟೆ ಆಗಬೇಕಿದೆ.