ಬೆಂಗಳೂರು, ಜೂ. ೧೩: ಅತಿ ಸುರಕ್ಷಿತ ನೋಂದಣಿ ಫಲಕ ಹೆಚ್.ಎಸ್.ಆರ್.ಪಿ. ಅಳವಡಿಕೆಗೆ ನಿಗದಿಪಡಿಸಿದ ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಹೆಚ್.ಎಸ್.ಆರ್.ಪಿ. ಅಳವಡಿಕೆ ವಿಚಾ ರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ ೪ ರವರೆಗೆ ಜರುಗಿಸಬಾರದು ಎಂದು ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ. ಹೆಚ್.ಎಸ್.ಆರ್.ಪಿ. ಅಳವಡಿಕೆಗೆ ವಿಧಿಸಲಾದ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿ.ಎನ್.ಡಿ. ಎನರ್ಜಿ ಲಿಮಿಟೆಡ್ ಮೊದಲಾದವರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಸರ್ಕಾರಕ್ಕೆ ಈ ಕುರಿತಾಗಿ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ, ಹೆಚ್.ಎಸ್.ಆರ್.ಪಿ. ಅಳವಡಿಕೆಗೆ ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ನ್ಯಾಯಪೀಠ ಅನುಮತಿ ನೀಡಿದಲ್ಲಿ ಗಡುವು ವಿಸ್ತರಿಸಲಾಗುವುದು ಎಂದು ಕೋರ್ಟಿಗೆ ತಿಳಿಸಿದ್ದರು. ಗಡುವು ವಿಸ್ತರಿಸಲು ಹೈಕೋರ್ಟ್ ಅನುಮತಿ ನೀಡಿದ್ದು, ಜುಲೈ ೪ರವರೆಗೆ ಬಲವಂತದ ಕ್ರಮಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.