ನಾಪೋಕ್ಲು, ಜು. ೭: ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಮತ್ತು ಬಲಿದಾನ ದಿನ ಆಚರಣೆ ಸಪ್ತಾಹವನ್ನು ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದಿAದ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು.

ಸಪ್ತಾಹ ಅಂಗವಾಗಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರವನ್ನು ಇಟ್ಟು ಪುಷ್ಪಾರ್ಚನೆ ಮಾಡಿ ಬಳಿಕ ಬಿಜೆಪಿ ಶಕ್ತಿ ಕೇಂದ್ರ ಸಂಚಾಲಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಭಗವತಿ ದೇವಸ್ಥಾನದ ಸಮೀಪ ಸಪ್ತಾಹ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷರು ಪಾಡಿಯಮ್ಮಂಡ ಮನು ಮಹೇಶ್, ತಾಲೂಕು ಹಿಂದುಳಿದ ಮೋರ್ಚಾ ಅಧ್ಯಕ್ಷ ಪ್ರತೀಪ ಬಿ.ಎಂ, ನಾಪೋಕ್ಲು ಬೂತ್ ಅಧ್ಯಕ್ಷ ಚೀಯಕಪೂವಂಡ ಸತೀಶ್ ದೇವಯ್ಯ, ಶಿವಚಾಳಿಯಂಡ ಕಿಶೋರ್ ಬೋಪಣ್ಣ ಹಾಗೂ ಹಿಂದೂ ಸಂಘಟನೆಯ ಪ್ರಮುಖ ಕಂಗಾAಡ ಜಾಲಿ ಪೂವಪ್ಪ, ಶಿವಚಾಳಿಯಂಡ ರೋಹಿಣಿ ಬೋಪಣ್ಣ, ಲತಾ, ಕೃಷ್ಣ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.