ಮಡಿಕೇರಿ, ಜು. ೮: ಯುವ ಬಂಟ್ಸ್ ಅಸೋಸಿಯೇಷನ್‌ನ ಮಹಾಸಭೆಯು ಅಧ್ಯಕ್ಷ ವಸಂತ್ ರೈ ಅಧ್ಯಕ್ಷತೆಯಲ್ಲಿ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ, ಉಪಾಧ್ಯಕ್ಷ ರವೀಂದ್ರ ರೈ, ಗೌರವಾಧ್ಯಕ್ಷ ಐತ್ತಪ್ಪ ರೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ, ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ರಮೇಶ್ ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕೆÀ್ಷ ಸೌಮ್ಯ ಶೆಟ್ಟಿ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಮುಂದಿನ ಸಾಲಿನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸದಾನಂದ ರೈ (ಪಪ್ಪು), ಉಪಾಧ್ಯಕ್ಷರಾಗಿ ಸುಜಿತ್ ಶೆಟ್ಟಿ, ಭಗವತಿನಗರ, ಮಿಥುನ್ ರೈ ವೀರಾಜಪೇಟೆ, ಕಾರ್ಯದರ್ಶಿಯಾಗಿ ನಿತಿನ್ ರೈ ಬಿಳಿಗೇರಿ, ಸಹ ಕಾರ್ಯದರ್ಶಿಯಾಗಿ ನಿಖಿಲ್ ಆಳ್ವ, ಖಜಾಂಚಿಯಾಗಿ ಶಿವಪ್ರಸಾದ್ ರೈ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರೈ ಮಡಿಕೇರಿ ಆಯ್ಕೆಯಾಗಿದ್ದಾರೆ.