ಕೂಡಿಗೆ, ಜು. ೮ : ರಾಜ್ಯ ಸರ್ಕಾರದ ಅದೇಶದನ್ವಯ ಜಿಲ್ಲಾಧಿಕಾರಿಗಳ ಸೂಚನೆಯಂತೆ ಎಲ್ಲಾ ಗ್ರಾಮಗಳ ರೈತರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡುವ ಕಾರ್ಯ ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ತಂಡದಿAದ ನಡೆಯುತ್ತಿದೆ.

ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ನೇಮಕಗೊಂಡಿರುವ ಗ್ರಾಮ ಲೆಕ್ಕಾಧಿಕಾರಿಗಳು ತಾಲೂಕು ತಹಶೀಲ್ದಾರರ ಸೂಚನೆಯಂತೆ ಪ್ರಮುಖ ಗ್ರಾಮ ಸೇರಿದಂತೆ ಉಪ ಗ್ರಾಮಗಳಿಗೆ ತೆರಳಿ ರೈತರನ್ನು ಭೇಟಿ ಮಾಡಿ ಆಧಾರ್ ಲಿಂಕ್ ಮಾಡುವ ಕಾರ್ಯ ನಡೆಸುತ್ತಿದ್ದಾರೆ.

ರೈತರು ಸರಕಾರದ ಯೋಜನೆಗಳಾದ ಬೆಳೆ ಹಾನಿ ಪರಿಹಾರ, ಬ್ಯಾಂಕ್‌ನಲ್ಲಿ ಕೃಷಿ ಸಾಲ ಪಡೆಯಲು, ಖಾತೆ ವರ್ಗಾವಣೆ ಹಾಗೂ ಇತರೆ ಎಲ್ಲಾ ಸರಕಾರಿ ಯೋಜನೆ ಪಡೆಯಲು ಆರ್.ಟಿ.ಸಿ.ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದಾಗಿ ಬಾಕಿ ಇರುವ ರೈತರು ತಮ್ಮ ತಮ್ಮ ಗ್ರಾಮ ಲೆಕ್ಕಾಧಿಕಾರಿಗಳನ್ನು ಭೇಟಿ ಮಾಡಿ ಅಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ತಿಳಿಸಿದ್ದಾರೆ.