ಮುಳ್ಳೂರು, ಜು. ೮ : ಹಂಡ್ಲಿ ಗ್ರಾ.ಪಂ.ವ್ಯಾಪ್ತಿಯ ಗುಡುಗಳಲೆ ಗ್ರಾಮದ ಜಯದೇವ ಜಾನುವಾರು ಜಾತ್ರಾ ಮೈದಾನದಲ್ಲಿ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಪುತ್ಥಳಿ ನಿರ್ಮಾಣ ಮಾಡುವ ಕುರಿತು ಪುತ್ಥಳಿ ನಿರ್ಮಾಣ ಸಮಿತಿಯ ಪ್ರಮುಖರು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿದರು. ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಸನ್ಮಾನಿಸಿದರು. ಬಳಿಕ ಪುತ್ಥಳಿ ನಿರ್ಮಾಣ ಸಮಿತಿ ವತಿಯಿಂದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಸಮೀಪ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ನಿರ್ಮಾಣ ಮಾಡಲು ನಿರ್ಣಯಿಸಲಾಗಿರುವ ಬಗ್ಗೆ ಸಂಸದರೊAದಿಗೆ ಚರ್ಚಿಸಿದರು.

ನಿಯೋಗದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಬಿ.ಕೆ. ಮೂರ್ತಿ ಪ್ರಮುಖರಾದ ಕೆ.ಪಿ. ಮಂಜುನಾಥ್ ಕೊಡ್ಲಿಪೇಟೆ, ಗಿರೀಶ್ ಬೆಸೂರು, ರವಿಕುಮಾರ್ ಸಂಪಿಗೆದಾಳು ಮುಂತಾದವರಿದ್ದರು.