ಮಡಿಕೇರಿ, ಜು. ೮: ಕವಿಗಳನ್ನು ಸಮಾಜ ಗಮನಿಸುತ್ತಿರುತ್ತದೆ ಹಾಗಾಗಿ ಕವನ ಬರೆಯುವವರು ಸಾಕಷ್ಟು ಎಚ್ಚರ ವಹಿಸಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀಥ ಹೇಳಿದರು. ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಹಾರಂಗಿಯಲ್ಲಿ ಭಾನುವಾರ ಏರ್ಪಡಿಸಿದ್ದ ಗ್ರೀಷ್ಮಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ ‘ಕಲ್ಪನೆಯ ಹನಿಗಳು’ ಕವನ ಸಂಕಲನ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕವನಗಳ ರಚನೆ ಬಹಳ ಸುಲಭ ಎಂದುಕೊಳ್ಳುತ್ತೇವೆ. ಆದರೆ ಇದರಷ್ಟು ಅಪಾಯಕಾರಿ ಕೆಲಸ ಯಾವುದೂ ಇಲ್ಲ. ಕವನ ಬರೆಯುವವರಿಗೆ ಅದರ ಪರಿಣಾಮಗಳ ಅರಿವು ಇರಬೇಕು. ಬರೆಯುವವರು ಓದುವ ಹವ್ಯಾಸ ಹೊಂದಿರಬೇಕು. ಶಬ್ದಗಳನ್ನು ಚೆಂದ ವಾಗಿ ಜೋಡಿಸುವುದು ಕೂಡ ಒಂದು ಕಲೆ. ಈ ಕಲೆ ಕವಿಗಳಿಗೆ ಇರಬೇಕು ಎಂದರು. ಕವನ ಬರೆದವರು ಅದನ್ನು ತಾವೇ ಒಮ್ಮೆ ಓದಬೇಕು. ನಂತರ ಅದನ್ನು ಒಳ್ಳೆಯ ವಿಮರ್ಶಕರಿಗೆ ಕೊಟ್ಟು ಸಲಹೆಗಳನ್ನು ಸಕರಾತ್ಮಕವಾಗಿ ಸ್ವೀಕರಿಸುವ ಗುಣ ಹೊಂದಿರಬೇಕು. ಯಾವುದೇ ವಿಷಯವನ್ನಾದರೂ ವಿಭಿನ್ನವಾಗಿ ಆಲೋಚಿಸಿ ಬರೆದಾಗ ಸುಂದರ ಕವನಗಳು ಸೃಷ್ಟಿಯಾಗುತ್ತವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹುಲುಗುಂದ ಗ್ರಾಮದಲ್ಲಿ ಹಾರಂಗಿ ಜಲಾಶಯ ನಿರ್ಮಾಣವಾಗಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ ಅವರ ಹೆಸರನ್ನು ಹಾರಂಗಿ ವೃತ್ತಕ್ಕೆ ನಾಮಕರಣ ಮಾಡಲು ಸ್ಥಳೀಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ ಹಾರಂಗಿ ಜಲಾಶಯ ನಿರ್ಮಾಣದ ಯೋಜನೆ ರೂಪಿಸಿದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಹೆಸರನ್ನು ಹಾರಂಗಿ ಅಣೆಕಟ್ಟೆ ಎದುರಿನ ವೃತ್ತಕ್ಕೆ ಇಡಲಾಗು ವುದು. ಈ ಬಗ್ಗೆ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾರಂಗಿಯಲ್ಲಿ ವೀರೇಂದ್ರ ಪಾಟೀಲ ಸ್ಮಾರಕ ನಿರ್ಮಾ ಣಕ್ಕೂ ಪ್ರಯತ್ನ ನಡೆಸಲಾಗುವುದು ಎಂದರು. ಉಳುವಂಗಡ ಕಾವೇರಿ ಉದಯ ಅವರ ‘ಕಲ್ಪನೆಯ ಹನಿಗಳು’ ಕವನ ಸಂಕಲನವನ್ನು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರAಗಿ ನಾಗರಾಜ್ ಪರಿಚಯಿಸಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್, ನಿವೃತ್ತ ಉಪನ್ಯಾಕಿಯರಾದ ಎ.ಎಸ್. ಪೂವಮ್ಮ, ತಿಲೋತ್ತಮೆ ನಂದಕುಮಾರ್ ಅವ ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾ ಯಿತು. ಕೆ.ಎಸ್. ಕೃಷ್ಣೇಗೌಡ ಮತ್ತಿತ ರರು ಇದ್ದರು. ನಂತರ ನಡೆದ ಕವಿ ಗೋಷ್ಠಿಯಲ್ಲಿ ಕಾರ್ಯಕ್ರಮದಲ್ಲಿ ೧೩ ಕವಿಗಳು ಕವನಗಳನ್ನು ವಾಚಿಸಿದರು.