ಮಡಿಕೇರಿ, ಜು. ೮: ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ಭರತ್ ಕುಮಾರ್ ಎಂಬವರಿಗೆ ಸೇರಿದ ಮನೆಯ ಹಿಂಬದಿಯ ಸೌದೆ ದಾಸ್ತಾನು ಕೋಣೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಕೋಣೆಯಲ್ಲಿದ್ದ ಮರದ ದಾಸ್ತಾನುಗಳು ಸುಟ್ಟು ಕರಕಲಾಯಿತು.

ರಾತ್ರಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಅಧಿಕಾರಿ ಶೋಭಿತ್ ಮತ್ತು ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸಿದ್ದಾರೆ.