ವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ತಮ್ಮ ೫೦ ನೇ ವರ್ಷದ ಹುಟ್ಟುಹಬ್ಬವನ್ನು ವೀರಾಜಪೇಟೆ ಪುರಸಭೆಯ ಸಭಾಂಗಣದಲ್ಲಿ ಪೌರ ಕಾರ್ಮಿಕರ ಜೊತೆ ಕೇಕ್ ಕತ್ತರಿಸಿ ಆಚರಣೆ ಮಾಡಿದರು.

ಈ ಸಂದರ್ಭ ಪೌರ ಕಾರ್ಮಿಕರ ಕಾಯಕ ಹಾಗೂ ಸ್ವಚ್ಛತೆ ಕಾಪಾಡುವಲ್ಲಿ ಅವರುಗಳ ಪರಿಶ್ರಮದ ಕುರಿತು ಪೊನ್ನಣ್ಣ ಶ್ಲಾಘನೆ ವ್ಯಕ್ತಪಡಿಸಿದ್ದರು.

ಪೌರಕಾರ್ಮಿಕರು ಶಾಸಕರಿಗೆ ಹಾರ ಹಾಕಿ, ಹೂಗುಚ್ಚ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭ ಪುರಸಭೆಯ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ತಹಶೀಲ್ದಾರ್ ಎಚ್.ಎನ್. ರಾಮಚಂದ್ರ, ಪುರಸಭೆ ಸಿಬ್ಬಂದಿ ಸೇರಿದಂತೆ ಪುರಸಭಾ ಸದಸ್ಯರುಗಳು, ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.ಮದೆನಾಡು: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಹುಟ್ಟುಹಬ್ಬ ಪ್ರಯುಕ್ತ ಮದೆ ಗ್ರಾಮ ಪಂಚಾಯಿತಿ ವತಿಯಿಂದ ತಾಳತ್‌ಮನೆಯಿಂದ ಕಾಟಕೇರಿ ತನಕ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭ ಮದೆ ಗ್ರಾಮ ಪಂಚಾಯಿತಿ ಸದಸ್ಯ ಅಗಸ್ಟಿನ್ ಜಯರಾಜ್, ಮಾಜಿ ಉಪಾಧ್ಯಕ್ಷೆ ಪಿ.ಸಿ. ಚಂದ್ರಾವತಿ, ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪೆರಾಜೆ: ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪೆರಾಜೆ ವಲಯ ಕಾಂಗ್ರೆಸ್ ವತಿಯಿಂದ ಪೆರಾಜೆ ಜಂಕ್ಷನ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ಶ್ರಮದಾನ ಹಮ್ಮಿಕೊಳ್ಳಲಾಯಿತು.ಮಡಿಕೇರಿ: ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ ಬಣ) ಮಡಿಕೇರಿ ನಗರದ ಬಡವರು, ಭಿಕ್ಷುಕರು ಮತ್ತು ನಿರ್ಗತಿಕರಿಗೆ ಸ್ವೆಟರ್ ವಿತರಿಸಲಾಯಿತು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೊಡಗು ಜಿಲ್ಲಾ ಸಮಿತಿಯ ಜಿಲ್ಲಾ ಸಂಚಾಲಕÀ ಹೆಚ್.ಎಲ್. ದಿವಾಕರ್, ಮಹಿಳಾ ಜಿಲ್ಲಾ ಸಂಚಾಲಕಿ ಪ್ರೇಮ, ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎ. ಕುಮಾರ್ ನೇತೃತ್ವದಲ್ಲಿ ಕೈಗೊಳ್ಳಲಾಗಿತ್ತು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಪಾಲ್ಗೊಂಡಿದ್ದರು.ಟಿ.ಶೆಟ್ಟಿಗೇರಿ: ಟಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಸಕ ಪೊನ್ನಣ್ಣ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಸಿದರು.ಸಿದ್ದಾಪುರ: ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಿದ್ಧಾಪುರದ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಳಿಕ ಸಿದ್ದಾಪುರ ಪಟ್ಟಣದ ವ್ಯಾಪ್ತಿಯಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.ವೀರಾಜಪೇಟೆ: ಶಾಸಕ ಎ.ಎಸ್ ಪೊನ್ನಣ್ಣ ಅವರ ೫೦ನೆ ಜನ್ಮದಿನದ ಪ್ರಯುಕ್ತ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ವಿಶ್ವನಾಥ್ ಸಿಂಪಿ, ಪುರಸಭಾ ಸದಸ್ಯರಾದ ಪ್ರಥ್ವಿನಾಥ್, ರಜನಿಕಾಂತ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅನೀಲ್, ಅನಿತ, ಮಮತಾ ನಾಮನಿರ್ದೇಶಿತ ಸದಸ್ಯ ಹಮೀದ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.ವೀರಾಜಪೇಟೆ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವೀರಾಜಪೇಟೆ ಸಮೀಪದ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸ್ನೇಹ ಭವನ ಆನಾಥಶ್ರಮದಲ್ಲಿರುವವರಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಬಳಿಕ ನಿರ್ಮಲ ಕೊಡಗು ಸ್ವಚ್ಚಾತಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಸ್ನೇಹ ಭವನದ ಸುತ್ತಮುತ್ತ ಗಿಡಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಬೇಟೋಳಿ ವಲಯ ಕಾಂಗ್ರೆಸ್ ಅಧ್ಯಕ್ಷ ವರ್ಗಿಸ್ ಲೆನಿನ್ ಸೇರಿದಂತೆ ಕಾಂಗ್ರೆಸ್ಸಿನ ಕಾರ್ಯಕರ್ತರು ಇದ್ದರು.