ಸೋಮವಾರಪೇಟೆ, ಜು. ೧೦: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾಗಿದ್ದ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಜೀವನ ಹಾಗೂ ಬಲಿದಾನ ಆಚರಣೆ ಸಪ್ತಾಹ ಕಾರ್ಯಕ್ರಮ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಮುಖಂಡರಾದ ಬಿ.ಬಿ. ಭಾರತೀಶ್ ಅವರುಗಳು ಭಾಗವಹಿಸಿ ಮಾತನಾಡಿ, ಶ್ಯಾಂ ಪ್ರಸಾದ್ ಮುಖರ್ಜಿ ಅವರ ಜೀವನ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ, ಆದರ್ಶ, ಬಲಿದಾನದ ಬಗ್ಗೆ ವಿವರಿಸಿದರು.

ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಪ.ಪಂ. ಸದಸ್ಯರುಗಳಾದ ಪಿ.ಕೆ. ಚಂದ್ರು, ಮಹೇಶ್, ಮೋಹಿನಿ, ಪಕ್ಷದ ಮುಖಂಡರುಗಳಾದ ವಿ.ಕೆ. ಲೋಕೇಶ್, ಎಸ್.ಆರ್. ಸೋಮೇಶ್, ಅಜೀಶ್‌ಕುಮಾರ್, ಕಂಠಿ ಕಾರ್ಯಪ್ಪ, ಉಮಾಶಂಕರ್, ರೇಣುಕ, ಇಂದಿರಾ ಸಾಲ್ಯಾನ್, ರೂಪ, ದರ್ಶನ್ ಜೋಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.