ಸೋಮವಾರಪೇಟೆ, ಜು. ೧೦: ವಿದ್ಯಾರ್ಥಿಗಳು ನಿರಂತರ ಕಲಿಕೆಗೆ ಒತ್ತು ನೀಡಬೇಕು ಎಂದು ತಾಲೂಕು ಒಕ್ಕಲಿ ಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಫ್ರೇಶರ್ಸ್ ಡೇ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿ ದರು. ಗ್ರಾಮೀಣ ಭಾಗದ ವಿದ್ಯಾರ್ಥಿ ಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ಒಕ್ಕಲಿಗರ ಸಂಘ ಸಂಸ್ಥೆಯನ್ನು ಹುಟ್ಟು ಹಾಕಿದೆ. ಶೇ.೯೯ರಷ್ಟು ಮಂದಿ ಗ್ರಾಮೀಣ ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷರು ಗಳಾಗಿ ಕೆ.ಎಲ್. ಕೀರ್ತನ್, ಎಚ್.ಆರ್. ಜೀವಿತ, ಉಪಾಧ್ಯಕ್ಷರುಗಳಾಗಿ ಪೂರ್ಣಚಂದ್ರ, ಸ್ನೇಹ, ಕ್ರೀಡಾ ಮಂತ್ರಿಗಳಾಗಿ ಕೃಷಿ, ಅಮೂಲ್ಯ, ಶಿಸ್ತುಪಾಲನಾ ಮಂತ್ರಿಗಳಾಗಿ ಮಿಥುನ್, ಇಬ್ಬನಿ, ಶಿಕ್ಷಣ ಸಚಿವರುಗಳಾಗಿ ಭಾನುಪ್ರಿಯಾ, ಧ್ರುತನ್, ಸಾಂಸ್ಕೃತಿಕ ಸಚಿವರುಗಳಾಗಿ ಗೌತಮ್, ರಕ್ಷಿತಾ, ಆರ್ಥಿಕ ಸಚಿವರುಗಳಾಗಿ ಅಭಿನವ್, ನಮನ, ಆರೋಗ್ಯ ಸಚಿವರುಗಳಾಗಿ ಸಂಕೀತ್, ಕೆ.ಎಸ್. ಮೌನೇಶ್ ಅವರುಗಳು ಪ್ರಮಾಣವಚನ ಸ್ವೀಕರಿಸಿದರು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಭಾತ್ಮೀದಾರ ಕೆ.ಎಂ.ಜಗದೀಶ್, ಸಂಘದ ಕಾರ್ಯದರ್ಶಿ ಗಣಪತಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪ್ರಾಂಶುಪಾಲ ಮಿಲ್‌ಡ್ರೆಡ್ ಗೋನ್ಸಾಲ್ವೆಸ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳು ಇದ್ದರು.