ಮಡಿಕೇರಿ, ಜು. ೧೧: ವೀರಾಜಪೇಟೆ ವಲಯದ ಹೆಗ್ಗಳ ಮತ್ತು ವೀರಾಜಪೇಟೆ ಶಾಖೆಗೆ ಒಳಪಡುವ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ತಾ. ೧೨ರಂದು (ಇಂದು) ಹಮ್ಮಿಕೊಳ್ಳಲಾಗಿದೆ.

ಗದ್ದೆ ಹಾಗೂ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ ನಷ್ಟ ಮಾಡುತ್ತಿರುವುದರಿಂದ ಹಾಗೂ ಹೆಚ್ಚು ಉಪಟಳ ನೀಡುತ್ತಿರುವುದರಿಂದ ಕದನೂರು ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಮನವಿಯ ಮೇರೆಗೆ ಅರಮೇರಿ, ಕದನೂರು, ಮೈತಾಡಿ, ಚಾಮಿಯಾಲ, ದೇವಣಗೇರಿ, ಬೇತ್ರಿ, ವಿ.ನಾಲ್ಕೇರಿ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ತೋಟದ ಮಾಲೀಕರು ಮತ್ತು ಕಾರ್ಮಿಕರು ಅಂದು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆ ಸಮಯದಲ್ಲಿ ಪಟಾಕಿ ಸಿಡಿಸಬಾರದೆಂದು ಹಾಗೂ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.