ಕುಶಾಲನಗರ, ಜು. ೧೧: ಸಮಾಜ ಸೇವೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ಶ್ರೀನಾಥ್ ವಿಷಾದಿಸಿದರು.

ಕುಶಾಲನಗರ ದೇವಾಲಯಗಳ ಒಕ್ಕೂಟ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರತಿಯೊಬ್ಬರೂ ಅಧ್ಯಾತ್ಮಿಕ ಹಾಗೂ ವ್ಯವಹಾರಿಕ ಶಿಕ್ಷಣ ಸಿದ್ಧಾಂತ ಗಳ ಪಾಲನೆ ಮಾಡಬೇಕಾಗಿದೆ, ನಾಮ ಜಪ ಮೂಲಕ ಭಗವಂತನ ಅನುಗ್ರಹ ಸಾಧ್ಯ ಎಂದ ಅವರು, ಅಧ್ಯಾತ್ಮಿಕ ಸಾಧನೆ ಮೂಲಕ ಆನಂದ ಹಾಗೂ ತೃಪ್ತಿ ದೊರೆಯುತ್ತದೆ ಎಂದು ಹೇಳಿದರು. ಇದೇ ಸಂದರ್ಭ ಗುರು ಪೂರ್ಣಿಮಾ ಮಹತ್ವದ ಬಗ್ಗೆ ಮಾತನಾಡಿದ ಅವರು, ಈ ತಿಂಗಳ ೨೧ ರಂದು ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯುವ ಗುರು ಪೂರ್ಣಿಮಾ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ದೇವಾಲಯ ಒಕ್ಕೂಟದ ಅಧ್ಯಕ್ಷ ಎಂ.ಕೆ. ದಿನೇಶ್ ದೇವಾಲಯಗಳ ಒಕ್ಕೂಟದ ಮಹತ್ವದ ಬಗ್ಗೆ ಮಾಹಿತಿ ತಿಳಿಸಿದರು. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ಒಕ್ಕೂಟದ ಮೂಲಕ ಮಾಡಿರುವ ಕಾರ್ಯ ಸಾಧನೆಗಳ ಬಗ್ಗೆ ತಿಳಿಸಿದರು. ಒಕ್ಕೂಟದ ಮೂಲಕ ಪ್ರತಿಯೊಂದು ದೇವಾಲಯ ಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವAತೆ ಅವರು ಕೋರಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್, ಖಜಾಂಚಿ ಎಸ್.ಕೆ. ಶ್ರೀನಿವಾಸ್, ಕುಶಾಲನಗರ ವಿವಿಧ ದೇವಾಲಯಗಳ ಪ್ರತಿನಿಧಿಗಳು ಮತ್ತು ಹಿಂದೂ ಜನ ಜಾಗೃತಿ ವೇದಿಕೆಯ ಪ್ರಮುಖರಾದ ಶ್ರೀಲಕ್ಷಿö್ಮ ಇದ್ದರು.