ಕುಶಾಲನಗರ, ಜು. ೧೧: ಗೋಮಾ ಳಕ್ಕೆ ಸೇರಿರುವ ಜಾಗವನ್ನು ಸ್ಮಶಾನಕ್ಕೆ ಕಾಯ್ದಿರಿಸಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬೈಚನಹಳ್ಳಿ ಗೆಳೆಯರ ಬಳಗದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕುಶಾಲನಗರದ ಬೈಚನಹಳ್ಳಿ ಗ್ರಾಮದ ಸರ್ವೆ ನಂಬರ್ ೨/೧ ರ ೯.೩೮ ಎಕರೆ ಪ್ರದೇಶದ ಗೋಮಾಳ ಜಾಗದಲ್ಲಿ ಕಾನೂನುಬಾಹಿರವಾಗಿ ಅನ್ಯ ಸಮುದಾಯದ ವ್ಯಕ್ತಿಗಳಿಗೆ ಸ್ಮಶಾನಕ್ಕೆ ಜಾಗ ಕಾಯ್ದಿರಿಸಿದ ಬಗ್ಗೆ ಬಳಗದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲೇ ಪ್ರತಿಭಟನೆ ಮಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.

ಕಳೆದ ಹಲವಾರು ವರ್ಷಗಳಿಂದ ಈ ಜಾಗದ ವ್ಯಾಜ್ಯ ನ್ಯಾಯಾಲಯ ದಲ್ಲಿದ್ದು, ನ್ಯಾಯಾಲಯದ ಆದೇಶಕ್ಕೂ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಥಳಕ್ಕೆ ಕಂದಾಯ ಅಧಿಕಾರಿ ಸಂತೋಷ್ ಮತ್ತು ಕುಶಾಲನಗರ ಪಟ್ಟಣ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಭೇಟಿ ನೀಡಿ ಪ್ರತಿಭಟನಾ ಕಾರರ ಅಹವಾಲನ್ನು ಸ್ವೀಕರಿಸಿದರು.

ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದ ಪ್ರತಿಭಟನಾಕಾರರು ತಪ್ಪಿದಲ್ಲಿ ಉಗ್ರ ಪ್ರತಿಭಟನೆ ನಡೆಸು ವುದಾಗಿ ಎಚ್ಚರಿಸಿದರು.

ಮಧ್ಯಾಹ್ನ ನಂತರ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಈ ಬಗ್ಗೆ ಸಂಪೂರ್ಣ ಕಡತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊAಡರು.

ಸ್ಥಳದಲ್ಲಿ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ಕ್ರಮಕೈಗೊ ಳ್ಳುವುದಾಗಿ ತಹಶೀಲ್ದಾರ್ ಪ್ರತಿಭಟನಾ