ಮಡಿಕೇರಿ, ಜು.೧೨ : ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣ ದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.

ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು ೫೦ ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು. ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ತಿಳಿಸಿದರು. ಮತ್ತೊಬ್ಬ ಮಹಾಲಕ್ಷಿö್ಮ ಅವರು ಜಾಗದ ಖಾತೆ ಮಾಡಿಕೊಡದೆ ಒಂದೂವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತ ರಲ್ಲಿ ಮನವಿ ಮಾಡಿದರು. ಈ ಬಗ್ಗೆ ಪೌರಾಯುಕ್ತ ವಿಜಯ್ ಅವರು ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಸೋಮವಾರಪೇಟೆ ತಾಲೂಕಿನ ಬಿಳಿಗೇರಿ ಗ್ರಾಮದ ವಸಂತ ಪಿ.ಕೆ. ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬAಧ ಕೆಲಸ ಮಾಡಿಸಿ ಕೊಡುವಂತೆ ಲೋಕಾಯುಕ್ತ ಡಿವೈಎಸ್‌ಪಿ ಅವರಲ್ಲಿ ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಹೇಳಿದರು.

ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡ ಬೇಕಿದ್ದು, ಈ ಸಂಬAಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು. ತಮ್ಮ ಕೆಲಸವನ್ನು ಕಾಲಮಿತಿಯಲ್ಲಿ ಮಾಡಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆ ಯಾಗುತ್ತಿರುವುದು ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಒಳ್ಳೆಯ ಕೆಲಸ ಮಾಡಿದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಕಚೇರಿಯಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಪವನ್‌ಕುಮಾರ್ ಹೇಳಿದರು.