ಸುಂಟಿಕೊಪ್ಪ, ಜು. ೧೨: ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ರೂ. ೯.೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ಕಂಬಿಬಾಣೆಯಲ್ಲಿ ವ್ಯಾಪ್ತಿಯಲ್ಲಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಬೆಳಗ್ಗಿನ ಜಾವ ಜನವಸತಿ ಪ್ರದೇಶದಲ್ಲಿಯೇ ಸಂಚರಿಸುತ್ತಿರುವುದರಿAದ ಗ್ರಾಮದ ಜನತೆ ಅಂತಕದಲ್ಲಿದೆ. ಮುಂದಿನ ದಿನಗಳಲ್ಲಿ ಕಾಡಾನೆಗಳಿಂದ ಜೀವ ಅಪಾಯಗಳು ಸಂಭವಿಸುವ ಮುನ್ನ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಮೂಲಕ ಕಾಡಾನೆಗಳ ನಿಯಂತ್ರಿಸಬೇಕು. ರೈಲ್ವೇ ಬ್ಯಾರಿಕೇಡ್ ಅಳವಡಿಕೆ ಕಾಮಗಾರಿಯನ್ನು ಆರಂಭಿಸುವ ಮೂಲಕ ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವಂತೆ ಶಾಸಕರ ಬಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಮನವಿ ಮಾಡಿದರು.

ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ ಅಂದಾಜು ರೂ. ೫೧ ಲಕ್ಷ ವೆಚ್ಚದ ಕಾಮಗಾರಿಯನ್ನು ನಿರ್ವಹಿಸಲು ಅನುದಾನ ಬಿಡುಗಡೆಗೊಂಡಿದೆ. ಅದೇ ಅತ್ತೂರು-ನಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ತಿಗಾಗಿ ರೂ. ೧.೮೦ ಲಕ್ಷ ಮೊತ್ತವನ್ನು ಬಿಡುಗಡೆಗೊಂಡಿದೆ ಎಂದು ಜಿಲ್ಲಾ ಪಂಚಾಯತ್ ರಾಜ್ ಅಭಿಯಂತರ ಫಯಾಜ್ ಆಹ್ಮದ್ ತಿಳಿಸಿದರು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಮಂತರ್ ಗೌಡ ತಿಳಿಸಿದರು. ಈ ಸಂದರ್ಭ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಿರಣ್ಣ, ಗ್ರಾ.ಪಂ. ಅಧ್ಯಕ್ಷೆ ರಾಧ, ಉಪಾಧ್ಯಕ್ಷ ಶಂಕರ, ಸದಸ್ಯರುಗಳಾದ ಆರ್.ಆರ್. ಮೋಹನ, ಕೆ.ಬಿ. ಕೃಷ್ಣ, ಆಶ್ವಿನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಲ್. ಮಧುಮತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ರೈ, ಮಾಜಿ ಸದಸ್ಯರುಗಳಾದ ಎ.ಪಿ. ಹ್ಯಾರಿ, ಸಿ.ಬಿ. ಚಂಗಪ್ಪ, ಶಾಲಾಭಿವೃದ್ಧಿ ಸಮಿತಿ ಗೌರವಧ್ಯಕ್ಷ ಮುಸ್ತಾಫ, ೭ನೇ ಹೊಸಕೋಟೆ ಗ್ರಾ.ಪಂ. ಸದಸ್ಯ ಮುಸ್ತಾಫ, ಮಾಜಿ ಸದಸ್ಯ ಅವಲಕುಟ್ಟಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.