ಮಡಿಕೇರಿ, ಜು. ೨೪: ಕ್ರೀಡಾಪಟುಗಳು ಕ್ರೀಡೆಯಲ್ಲಿ ಶಿಸ್ತಿನೊಂದಿಗೆ ಸಮಯ ಪಾಲನೆ ಮಾಡಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವೆಂದು ಮಾಜಿ ಅಂತರರಾಷ್ಟಿçÃಯ ರಗ್ಬಿ ಆಟಗಾರ ಹಾಗೂ ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು.

ವೀರಾಜಪೇಟೆಯ ಪ್ರಗತಿ ಶಾಲೆಯಲ್ಲಿ ನಡೆದ, ಅಂಡರ್ ೧೪ ಮಿನಿ ಒಲಂಪಿಕ್ ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಬಾಲಕ ಮತ್ತು ಬಾಲಕಿಯರಿಗೆ ಕೌಶಲ್ಯ ತರಬೇತಿ ಮತ್ತು ಫಿಟ್ನೆಸ್ ತರಬೇತಿ ನೀಡಿ ಅವರು ಮಾತನಾಡಿದರು. ಕ್ರೀಡಾ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಮುಖ್ಯವಾಗಿ ಕ್ರೀಡಾಪಟುಗಳು ಶಿಸ್ತು ಮತ್ತು ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಈ ಸಂದರ್ಭ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾರ್ಯದರ್ಶಿ ಪಿ.ಎ ನಾಗೇಶ್(ಈಶ್ವರ್), ಉಪಾಧ್ಯಕ್ಷ ಕ್ರಿಸ್ಟೋಫರ್, ಖಜಾಂಚಿ ದೀಪು ಮಾಚಯ್ಯ, ಎಂಸಿಸಿ ಕ್ಲಬ್ ಕಾರ್ಯದರ್ಶಿ ಉಮೇಶ್ ಇದ್ದರು.