ಮಡಿಕೇರಿ, ಜು. ೨೫: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ತಾ. ೨೬ ರಂದು (ಇಂದು) ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೀಪನಮನ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ತಿಳಿಸಿದ್ದಾರೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯಿರುವ ಗಾಂಧಿ ಭವನದಲ್ಲಿ ಸಂಜೆ ೬.೩೦ ಗಂಟೆಗೆ ಆಯೋಜಿತ ಕಾರ್ಯಕ್ರಮದಲ್ಲಿ ದೇಶದ ಸೇನಾನಿಗಳನ್ನು ಸ್ಮರಿಸುವ ದೇಶಭಕ್ತಿಗೀತೆ ಕಾರ್ಯಕ್ರಮ ಇರುತ್ತದೆ. ಸುಂಟಿಕೊಪ್ಪದ ವಿದ್ಯಾರ್ಥಿನಿ ಶ್ರೀಜಾ ಅವರಿಂದ ದೇಶದ ಸೇನಾನಿಗಳ ಮಹತ್ವದ ಬಗ್ಗೆ ಮಾತು, ನಂತರ ಕಾರ್ಗಿಲ್ ಹುತಾತ್ಮರಿಗೆ ಗೌರವಸೂಚಕವಾಗಿ ದೀಪಗಳನ್ನು ಬೆಳಗಿಸಿ ನಮನ ಸಲ್ಲಿಸಲಾಗುತ್ತದೆ. ಈ ಸಂದರ್ಭ ಕಾರುಗುಂದದ ಮಾಜಿ ಯೋಧ ಬಿ.ಎ. ಲೋಕೇಶ್ ಅವರನ್ನು ಸನ್ಮಾನಿಸಲಾಗುತ್ತದೆ. ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರಯೋಧರಿಗೆ ತಮ್ಮ ಗೌರವ ಸೂಚಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.