ನಾಪೋಕ್ಲು, ಆ. ೨೯: ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ಆಶ್ರಯದಲ್ಲಿ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಯೂತ್ ಕ್ಲಬ್ ಅಧ್ಯಕ್ಷ ಕಾಳೆಯಂಡ ರಿನೇಶ್ ಪೊನ್ನಪ್ಪ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಎಸ್ಪಿ ಬೊಳ್ಯೆಪಂಡ ರವಿ ಮಾಚಯ್ಯ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಸ್ಪರ್ಧೆಯನ್ನು ಉದ್ಘಾಟಿಸಿದರು.

ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಬೊಳ್ಯಪಂಡ ಜಾನ್ ಪೂಣಚ್ಚ ಪ್ರಥಮ ಸ್ಥಾನ ಗಳಿಸಿದರು. ಕಾಳಚಂಡ ಹರ್ಷ ಉತ್ತಯ್ಯ ದ್ವಿತೀಯ ಸ್ಥಾನ ಪಡೆದರು. ಬೇತು ಗ್ರಾಮದ ಕಾಫಿ ಬೆಳೆಗಾರ ಕುಟ್ಟಂಜೆಟ್ಟಿರ ಶ್ಯಾಂ ಬೋಪಣ್ಣ, ಕೊಂಡಿರ ಕಾಳಯ್ಯ, ಠಾಣಾಧಿಕಾರಿ ಮಂಜುನಾಥ್ ಸಂಘದ ಪದಾಧಿಕಾರಿಗಳು ಸದಸ್ಯರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ಬಲ್ಲಮಾವಟಿಯಲ್ಲಿ

ಸಮೀಪದ ಬಲ್ಲಮಾವಟಿ ಗ್ರಾಮದ ಅಪೋಲೋ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕೈಲ್ ಪೊಳ್ದ್ ಪ್ರಯುಕ್ತ ಆಟೋಟ ಜರುಗಿತು. ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮುಕ್ಕಾಟಿರ ಕೆ. ಸುತನ್ ಸುಬ್ಬಯ್ಯ, ಶಿಕ್ಷಕಿ ಮೂವೆರ ಕಾವೇರಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ರಾಷ್ಟಿçÃಯ ಹಾಕಿ ತೀರ್ಪುಗಾರ ಅಪ್ಪಚೆಟ್ಟೋಳಂಡ ಬಿ. ಹರ್ಷಿತ್ ಐಯ್ಯಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.