ಮಡಿಕೇರಿ, ಆ. ೩೦: ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಮಡಿಕೇರಿ ಬಾಲ ಗೋಕುಲ ಇವರ ವತಿಯಿಂದ ನಗರದ ಮಹದೇವ ಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು.

ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಹ ಸಂಪರ್ಕ ಪ್ರಮುಖ ಕುಟ್ಟಂಡ ಪ್ರಿನ್ಸ್ ಗಣಪತಿ ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧ:ಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ ಶಿಕ್ಷಣ, ಇದನ್ನು ಬೋಧಿಸುವ ವ್ಯವಸ್ಥೆಯೇ ಬಾಲಗೋಕುಲಗಳಾಗಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಬಸಪ್ಪ ಶಿಶು ವಿಹಾರದ ಅಧ್ಯಕ್ಷೆ ಸುಜಾತ ಭಟ್ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಮಕ್ಕಳು ಛದ್ಮವೇಷ ಸಮಾಗಮದಲ್ಲಿ ಭಾಗವಹಿಸಿ ಸಂಭ್ರಮಪಟ್ಟರು.