ಗೋಣಿಕೊಪ್ಪಲು, ಆ.೩೦: ಖಾಸಗಿ ಬಸ್‌ಗೆ ಸೈಡ್ ನೀಡಲಿಲ್ಲ ಎಂಬ ಕಾರಣ ಮುಂದಿಟ್ಟುಕೊAಡು, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಪೊನ್ನಂಪೇಟೆಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆಯಲ್ಲಿ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಆರೋಪದಡಿ ಖಾಸಗಿ ಬಸ್ ಚಾಲಕರಾದ ಭರತ್ ಕುಮಾರ್, ಕಂಡಕ್ಟರ್ ತಿಮ್ಮಯ್ಯ ಹಾಗೂ ಕ್ಲೀನರ್ ದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋದ ಬಸ್ ಚಾಲಕ ದೂರುದಾರ ಯಶ್ವಂತ್ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.