ಮಡಿಕೇರಿ, ಆ.೩೦ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸೆ.೧ ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ಮಂದ್‌ನಲ್ಲಿ ೨೯ನೇ ವರ್ಷದ ಸಾರ್ವತ್ರಿಕ ``ಕೈಲ್ ಪೊಳ್ದ್'' ಹಬ್ಬವನ್ನು ಆಚರಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ರಾಜ್ಯಸಭಾ ಮಾಜಿ ಸದಸ್ಯ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹಬ್ಬದ ಪ್ರಯುಕ್ತ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.