ಮಡಿಕೇರಿ, ಆ. ೩೧: ಕಡಗದಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಶುಕ್ರವಾರ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಮಡಿಕೇರಿ ರೋಟರಿ, ಕಡಗದಾಳು ಸರ್ಕಾರಿ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಮರ ಗಿಡಗಳನ್ನು ಬೆಳೆಸಿ ಉತ್ತಮ ಪರಿಸರ ಕಾಣಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ಸಾಮಾಜಿಕ ಪಿಡುಗಾಗಿದ್ದು, ಹೆಣ್ಣುಮಕ್ಕಳ ಭವಿಷ್ಯವನ್ನು ಕುಗ್ಗಿಸುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಕಡೆಗಣಿಸಿದಲ್ಲಿ ಸಮಾಜ ಅಧಃಪತನಕ್ಕೆ ಹೋಗುತ್ತದೆ. ಆದ್ದರಿಂದ ಪ್ರತಿಯೊಬ್ಬರನ್ನೂ ಗೌರವಿಸಬೇಕು. ಸಮಾನ ಅವಕಾಶಗಳು ಸಿಗುವಂತಾಗಬೇಕು ಎಂದು ಶುಭ ಅವರು ಹೇಳಿದರು.

ಆಧುನಿಕತೆ ಬೆಳೆದಂತೆ ಅವಕಾಶಗಳು ಸಹ ವಿಫಲವಾಗಿವೆ. ಆ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಂಡು ಲಭ್ಯವಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಾರ್ವಜನಿಕರಿಗೆ ಕಾನೂನಾತ್ಮಕವಾಗಿ ಒಳಿತು ಮಾಡುವ ನಿಟ್ಟಿನಲ್ಲಿ ಸ್ಪಂದಿಸಲಿದೆ ಎಂದರು. ಮಡಿಕೇರಿ ರೋಟರಿ ಅಧ್ಯಕ್ಷರಾದ ಸುದೈ ನಾಣಯ್ಯ ಅವರು ಮಾತನಾಡಿ, ಹಿಂದೆ ಹಲವು ಕಾಡು ಹಣ್ಣುಗಳನ್ನು ನೋಡುತ್ತಿದ್ದೆವು. ಆದರೆ ಇಂದಿನ ಮಕ್ಕಳಿಗೆ ಕಾಡು ಹಣ್ಣುಗಳ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ಕಾಡು ಹಣ್ಣು ಸೇರಿದಂತೆ ಹಣ್ಣಿನ ಗಿಡಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದರು. ವಿವಿಧ ರೀತಿಯ ಹಣ್ಣಿನ ಗಿಡಗಳು ಹಾಗೂ ಮರಗಳನ್ನು ಬೆಳೆಯಬೇಕು. ಇದರಿಂದ ಪರಿಸರ ರಕ್ಷಣೆ ಸಾಧ್ಯವಾಗಲಿದೆ ಎಂದರು.

ರೋಟರಿ ಸಂಸ್ಥೆಯು ಪರಿಸರ ಸಂರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಮುಖರಾದ ಕೆ.ಎಸ್. ತಮ್ಮಯ್ಯ ಅವರು ಮಾತನಾಡಿ ಜಲಸಿರಿ, ವನಸಿರಿ, ಆರೋಗ್ಯಸಿರಿ ಹಾಗೂ ವಿದ್ಯಾಸಿರಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಜೊತೆಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತಾಗಬೇಕು ಎಂದರು.

ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಅವರು ಮಾತನಾಡಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಉಪಯೋಗಿಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಹಲವು ಸರ್ಕಾರೇತರ ಸಂಸ್ಥೆಗಳು ಸಹ ರಕ್ಷಣೆ ಸಾಧ್ಯವಾಗಲಿದೆ ಎಂದರು.

ರೋಟರಿ ಸಂಸ್ಥೆಯು ಪರಿಸರ ಸಂರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಮುಖರಾದ ಕೆ.ಎಸ್. ತಮ್ಮಯ್ಯ ಅವರು ಮಾತನಾಡಿ ಜಲಸಿರಿ, ವನಸಿರಿ, ಆರೋಗ್ಯಸಿರಿ ಹಾಗೂ ವಿದ್ಯಾಸಿರಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಜೊತೆಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತಾಗಬೇಕು ಎಂದರು.

ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಅವರು ಮಾತನಾಡಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಉಪಯೋಗಿಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಹಲವು ಸರ್ಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ಅವರು ಹೇಳಿದರು.

ಪ್ರಮುಖರಾದ ಸುರೇಶ್ ಚಂಗಪ್ಪ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪರಿಸರ ಪ್ರಜ್ಞೆ ಹೆಚ್ಚಿನದ್ದಾಗಿದೆ. ಪರಿಸರ ಜಾಗೃತಿ ಹಿಂದಿನಿAದಲೂ ನಡೆದುಕೊಂಡು ಬಂದಿದೆ. ಇದನ್ನು ಮುಂದುವರಿಸಿಕೊAಡು ಹೋಗುವಂತಾಗಬೇಕು. ಪರಿಸರವನ್ನು ಮತ್ತಷ್ಟು ಸಂರಕ್ಷಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.

ರೋಟರಿ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ, ಸದಸ್ಯರಾದ ಪಾರ್ವತಿ, ಮಲ್ಲಿಕಾ ಇತರರು ಇದ್ದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ ಅವರು ಸ್ವಾಗತಿಸಿದರು, ಆರತಿ ನಿರೂಪಿಸಿದರು. ಹರ್ಷಿತಾ ಪ್ರಾರ್ಥಿಸಿದರು. ವಿಮಲ ವಂದಿಸಿದರು.