ಕೂಡಿಗೆ, ಆ. ೩೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಾಕಾಲೋನಿ ಹಾಡಿ, ಗಂಧದಹಾಡಿ, ಬ್ಯಾಡಗೊಟ್ಟ ಪುರ್ನವಸತಿ ಕೇಂದ್ರಕ್ಕೆ ಕಂದಾಯ ಇಲಾಖೆಯ ಅಧಿಕಾರಿ, ತಾಲೂಕು ಆಹಾರ ಇಲಾಖೆಯ ಪರಿ ವೀಕ್ಷಕರು ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ನೀಡಿ ಹಾಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಸರಕಾರದಿಂದ ಸವಲತ್ತುಗಳನ್ನು ಪಡೆಯಲು ಬೇಕಾಗುವ ದಾಖಲೆಯನ್ನು ಸರಿಪಡಿಸುವ ಬಗ್ಗೆ ಕಂದಾಯ ಇಲಾಖೆಯ ಆಧಾರ್ ಕಾರ್ಡ್ ಮತ್ತು ಆಹಾರ ಪಡಿತರ ಚೀಟಿಯಲ್ಲಿನ ಸಮಸ್ಯೆಯನ್ನು ಸರಿಪಡಿಸುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ರವಿ, ರತ್ನಮ್ಮ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ತಾಲೂಕು ಅಹಾರ ಇಲಾಖೆಯ ಪರಿವೀಕ್ಷಣಾಧಿಕಾರಿ ಸ್ವಾತಿ, ಕಂದಾಯ ಇಲಾಖೆಯ ಸಿಬ್ಬಂದಿ ಲೋಕೇಶ್ ಸೇರಿದಂತೆ ಹಾಡಿ ಮುಖ್ಯಸ್ಥರು, ಗ್ರಾಮಸ್ಥರು ಹಾಜರಿದ್ದರು.