ಮಡಿಕೇರಿ, ಆ. ೩೧: ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳ ಜನ್ಮ ದಿನೋತ್ಸವವನ್ನು 'ಕೊಡವ ಸಾಹಿತ್ಯ ನಾಳ್' ಎಂಬ ಹೆಸರಿನಲ್ಲಿ ಆಚರಿಸಲು ಸಿದ್ದತೆ ನಡಸುತ್ತಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಈ ಸಂಬAಧ ಚೇರಂಬಾಣೆಯಲ್ಲಿರುವ ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಪೂರ್ವ ಭಾವಿ ಸಭೆ ನಡೆಸಿತು.

ಚೇರಂಬಾಣೆ ಕೊಡವ ಸಮಾಜ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ ಅಧ್ಯಕ್ಷತೆಯ ಸಭೆಯಲ್ಲಿ ನಡೆದ ಕೊಡವ ಅಕಾಡೆಮಿಯ ಅಧ್ಯಕ್ಷ vಅಜ್ಜಿನಿಕಂಡ ಮಹೇಶ್ ನಾಚಯ್ಯ ‘ಸಾಹಿತ್ಯ ನಾಳ್'ನ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು. ಕೊಡವ ಸಾಹಿತ್ಯ ನಾಳನ್ನು ಸಾಹಿತ್ಯ ಸಂಸ್ಕೃತಿಗಳ ಕಲರವದೊಂದಿಗೆ ಅದ್ಧೂರಿಯಾಗಿ ನಡೆಸುವಂತೆ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಯಿತು.

ಸುಮಾರು ಒಂದು ಸಾವಿರಕ್ಕೂ ಅಧಿಕ ಜನರ ಭಾಗವಹಿಸುವಿಕೆಯನ್ನು ನಿರೀಕ್ಷಿಸಲಾಗಿರುವ ಕಾರ್ಯಕ್ರಮದ ಮೊದಲು ಚೇರಂಬಾಣೆ ಪಟ್ಟಣದಲ್ಲಿ ಅದ್ಧೂರಿ ಸಾಂಸ್ಕೃತಿಕ ಮೆರವಣಿಗೆ ನಡೆಸಲಾಗುವುದು. ತದನಂತರ ವೇದಿಕೆ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಅಪ್ಪಚ್ಚಕವಿಗಳ ವಿಚಾರದಲ್ಲಿ ವಿಷಯ ಮಂಡನೆ, ಹಾಡುಗಾರಿಕೆ, ಹಲವು ಸ್ಪರ್ಧೆಗಳನ್ನು ಏರ್ಪಡಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಕಾರ್ಯವನ್ನು ಸುಲಲಿತವಾಗಿ ನಡೆಸಲು ಅನುಕೂಲವಾಗುವಂತೆ ಹಲವು ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮಕ್ಕೆ ಸಚಿವರು, ಸಂಸದರು, ಶಾಸಕರುಗಳನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಸೆ. ೨೮ರಂದು ಈ ಕಾರ್ಯಕ್ರಮ ನಿಗದಿಯಾಗಿದೆ.

ಪೂರ್ವಭಾವಿ ಸಭೆಯಲ್ಲಿ ಬೇಂಗ್‌ನಾಡ್ ಕೊಡವ ಸಮಾಜದ ಮಾಜಿ ಅಧ್ಯಕ್ಷ ಕುಟ್ಟೇಟಿರ ಉತ್ತಯ್ಯ, ಕಾರುಗುಂದ ವ್ಯವಸಾಯ ಕೃಷಿ ಪತ್ತಿನ ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ, ಬೆಂಗಳೂರು ಕೊಡವ ಸಮಾಜದ ಜಂಟಿ ಖಜಾಂಚಿ ಪೊನ್ನಚೆಟ್ಟಿರ ರಮೇಶ್ ಗಣಪತಿ, ಚಿತ್ರಕಲಾವಿದ ತೇಲಪಂಡ ಪವನ್, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ. ಪೊನ್ನಪ್ಪ, ಕಲ್ಮಾಡಂಡ ಉತ್ತಯ್ಯ, ಕುಂಚೆಟ್ಟಿರ ಅಜಿತ್, ಮಂದಪAಡ ಸುಬ್ಬಯ್ಯ, ತೇಲಪಂಡ ಸತ್ಯ, ತೇಲಪಂಡ ಲಕ್ಷಿö್ಮ, ಅಕಾಡೆಮಿ ರಿಜಿಸ್ಟಾçರ್ ಅಜ್ಜಿಕುಟ್ಟಿರ ಗಿರೀಶ್, ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ನಾಪಂಡ ಗಣೇಶ, ಪಾನಿಕುಟ್ಟಿರ ಕುಟ್ಟಪ್ಪ, ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್, ಸಮಾಜದ ಅಡಳಿತ ಮಂಡಳಿಯ ಸರ್ವ ನಿರ್ದೇಶಕರು, ಸದಸ್ಯರು ಹಾಜರಿದ್ದರು.