ಸುAಟಿಕೊಪ್ಪ, ಸೆ. ೧: ಇಲ್ಲಿನ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಮತ್ತು ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಾರಾಯಣ ಗುರುಗಳ ೧೭೦ನೇ ಜಯಂತಿ ಹಾಗೂ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತೀಶ್ ಮಾತನಾಡಿ, ಒಂದೇ ಕುಲ, ಮನುಜರೆಲ್ಲರೂ ಒಂದೇ ಎಂದು ಪ್ರತಿಪಾದಿಸಿದ ನಾರಾಯಣ ಗುರುಗಳ ಜೀವನವನ್ನು ನಾವೆಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ಸದಸ್ಯರಾದ ವೀಣಾ ಮಾತನಾಡಿ, ಸಹೋದರಿಯ ರಕ್ಷಣೆಯನ್ನು ಪ್ರತಿಯೊಬ್ಬ ಸಹೋದರನು ಮಾಡಿದಲ್ಲಿ ರಾಮರಾಜ್ಯದ ಕನಸು ನನಸಾಗಲಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ನಾರಾಯಣ ಗುರುಗಳ ಭಾವಚಿತ್ರಕ್ಕೆ ನಾರಾಯಣಗುರು ಬಿಲ್ಲವ ಸೇವಾ ಸಂಘದ ಸಲಹಾ ಸಮಿತಿಯ ಸದಸ್ಯರಾದ ಬಿ.ಬಿ ಮೋನಪ್ಪ ಪೂಜಾರಿ ಪೂಜೆ ಸಲ್ಲಿಸಿದರು.

ನಂತರ ನೆರೆದಿದ್ದ ಬಿಲ್ಲವ ಸಮಾಜದ ಸದಸ್ಯರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಿತಿಯ ಸದಸ್ಯರುಗಳು ಒಬ್ಬರಿಗೊಬ್ಬರು ರಾಕಿ ಕಟ್ಟುವ ಮೂಲಕ ರಕ್ಷಾಬಂಧನವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಎಂ ಮಣಿ ಮುಖೇಶ್, ದೇಯಿ ಬೈದೇತಿ ಮಹಿಳಾ ಸಂಘದ ಅಧ್ಯಕ್ಷರಾದ ಮಧು ನಾಗಪ್ಪ, ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಕೋಟ್ಯಾನ್, ಸಲಹಾ ಸಮಿತಿ ಸದಸ್ಯರಾದ ಡಾ. ಯಶೋಧರ ಪೂಜಾರಿ, ಕೆ.ಪಿ. ಜಗನ್ನಾಥ್, ಬಿ.ಬಿ ಜಿನ್ನಪ್ಪ ಪೂಜಾರಿ, ರಮೇಶ್ ಪೂಜಾರಿ, ರಮೇಶ್ ಕೊಡಗರಹಳ್ಳಿ, ಅಂಜಲಿ ಯಶೋಧರ ಪೂಜಾರಿ, ಮಹಿಮಾ ಸತ್ಯ, ಪೂರ್ಣಿಮಾ ರವಿ, ಬೇಬಿ, ಮೀನಾಕ್ಷಿ, ಅಶೋಕ್, ಮಿಲನ್, ಹರೀಶ್ ಸೋಮವಾರಪೇಟೆ ಸೇರಿದಂತೆ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.