ಮಡಿಕೇರಿ, ಸೆ. ೨: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕವನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಕನ್ನಡಪ್ರಭ ಶನಿವಾರಸಂತೆ ವರದಿಗಾರ ಹೆಚ್. ಆರ್. ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಾಣಿ ಸೋಮವಾರಪೇಟೆ ವರದಿಗಾರ ಡಿ.ಪಿ. ಲೋಕೇಶ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಸೋಮವಾರಪೇಟೆ ವರದಿಗಾರ ತೇಲಪಂಡ ಕವನ್ ಕಾರ್ಯಪ್ಪ, ಖಜಾಂಚಿಯಾಗಿ ಸೋಮವಾರಪೇಟೆ ಕೊಡಗು ಚಾನೆಲ್ ವರದಿಗಾರ ದುಷ್ಯಂತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಕಾವೇರಿ ವೆಬ್ ಚಾನೆಲ್‌ನ ಶನಿವಾರಸಂತೆ ವರದಿಗಾರ ಹೋಮೇಶ್ ಮಣಗಲಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಜಯಪ್ಪ ಹಾನಗಲ್, ಟೋಮಿ ಥಾಮಸ್, ಎಸ್.ಆರ್. ವಸಂತ್, ಸುಕುಮಾರ್ ಆಯ್ಕೆಯಾಗಿದ್ದಾರೆ.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಸ್. ಮುರುಳೀಧರ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು.