ಸೋಮವಾರಪೇಟೆ, ಸೆ. ೨: ವಿಶ್ವ ಹಿಂದೂ ಪರಿಷತ್‌ನ ಸಂಸ್ಥಾಪನಾ ದಿನದ ಅಂಗವಾಗಿ ಸೋಮವಾರಪೇಟೆ ಪ್ರಖಂಡದ ವತಿಯಿಂದ ಸ್ಥಳೀಯ ಕೊಡವ ಸಮಾಜದಲ್ಲಿ ಸಂಸ್ಥಾಪನಾ ದಿನ ಹಾಗೂ ಷಷ್ಟಿ ಪೂರ್ತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಇಲ್ಲಿನ ವಿರಕ್ತ ಮಠದ ಮಠಾಧೀಶ ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಮಾತನಾಡಿ, ನಮ್ಮ ಧರ್ಮ ಮತ್ತು ಆಚರಣೆಗಳನ್ನು ನಮ್ಮವರೇ ತೆಗಳುವುದರಿಂದ ನಮ್ಮ ದೇಶದಲ್ಲಿಯೇ ಹಿಂದೂ ಧರ್ಮಕ್ಕೆ ಧಕ್ಕೆ ಬರುತ್ತಿದೆ. ಇಂತಹ ಕಾರ್ಯಗಳು ಮುಂದುವರಿಯುತ್ತಾ ಹೋದರೆ ಹಿಂದುತ್ವದ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಬರಲಿದೆ ಎಂದರು.

ದಿಕ್ಸೂಚಿ ಭಾಷಣ ಮಾಡಿದ ವಿ.ಹಿಂ.ಪ. ನ ಜಿಲ್ಲಾ ಬೌದ್ಧಿಕ್ ಪ್ರಮುಖ್ ಚಿ.ನಾ. ಸೋಮೇಶ್ ಮಾತನಾಡಿ, ೧೯೬೪ರ ಆಗಸ್ಟ್ ೨೯ರಂದು ಮುಂಬೈನಲ್ಲಿ ವಿ.ಹಿಂ.ಪ. ಸ್ಥಾಪನೆಯಾಯಿತು. ಇದರ ಸ್ಥಾಪನೆಗೆ ಬಾಬಾ ಅಮ್ಟೆಯವರು ಕಾರಣೀ ಪುರುಷರಾಗಿದ್ದರು. ಅಂದಿನಿAದ ವಿ.ಹಿಂ.ಪ. ಸಮಾಜದಲ್ಲಿನ ಹಲವಾರು ಸಮಸ್ಯೆಗಳಿಗೆ ತಕ್ಕ ಉತ್ತರ ನೀಡುತ್ತಾ, ಹಿಂದೂ ಸಮಾಜವನ್ನು ಉಳಿಸಿ, ಬೆಳೆಸುವ ಕಾರ್ಯ ಮಾಡುತ್ತಾ ಬರುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮೀನುಗಾರಿಕಾ ಇಲಾಖೆಯ ನಿರ್ದೇಶಕಿ ಮಿಲನ ಭರತ್ ಮಾತನಾಡಿ, ಶ್ರೀಕೃಷ್ಣ ಹುಟ್ಟಿದ ದಿನವೇ ವಿ.ಹಿಂ.ಪರಿಷತ್‌ನ ಸ್ಥಾಪನೆಯಾಯಿತು. ಶ್ರೀಕೃಷ್ಣ ಪರಮಾತ್ಮನಿಗೆ ದೊಡ್ಡ ಆರಾಧನೆ ಮಾಡದೆ ಕೇವಲ ಪ್ರೀತಿಸಿ, ಭಜಿಸಿದರೆ ಸಾಕು; ಆತನ ಕೃಪೆಗೆ ಪಾತ್ರರಾಗಬಹುದು. ಈ ದಿನ ಮಕ್ಕಳಿಗೆ ಶ್ರೀಕೃಷ್ಣನ ವೇಷ ಹಾಕುವ ಮೂಲಕ ನಾವು ಪರಮಾತ್ಮನನ್ನು ಕಾಣುತ್ತಿದ್ದೇವೆ ಎಂದರು.ಅಧ್ಯಕ್ಷತೆ ವಹಿಸಿದ್ದ ವಿ.ಹಿಂ.ಪ.ನ ಸೋಮವಾರಪೇಟೆ ಪ್ರಖಂಡದ ಅಧ್ಯಕ್ಷ ಎ.ಎಸ್. ಮಲ್ಲೇಶ್ ಅವರು,ಪರಿಷತ್ ಬೆಳೆದು ಬಂದ ಹಾದಿಯನ್ನು ವಿವರಿಸಿದರು. ವೇದಿಕೆಯಲ್ಲಿ ಚೌಡ್ಲು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ನೌಕರ ಹೆಚ್.ಹೆಚ್. ಹೂವಯ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಲಕ್ಷಿö್ಮÃ ಪ್ರಾರ್ಥಿಸಿದರು. ಜಿಲ್ಲಾ ಸತ್ಸಂಗ ಪ್ರಮುಖ್ ಪವಿತ್ರಾ ಶೇಷಾದ್ರಿ ನಿರೂಪಿಸಿ, ಪ್ರಖಂಡದ ದುರ್ಗಾವಾಹಿನಿ ಪ್ರಮುಖ್ ಭಾನುಮತಿ ಆದರ್ಶ್ ಸ್ವಾಗತಿಸಿ, ವಿಧಿ ಪ್ರಕೋಷ್ಠದ ಸಂಚಾಲಕ ವಕೀಲ ಹೇಮಚಂದ್ರ ವಂದಿಸಿದರು. ೧ ರಿಂದ ೭ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ- ರಾಧೆಯರ ಛಧ್ಮವೇಷ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ವಿ.ಹಿಂ.ಪ.ನ ಜಿಲ್ಲಾಧ್ಯಕ್ಷ ಸಿ.ಕೆ. ಬೋಪಣ್ಣ, ಜಿಲ್ಲಾ ಸಮಿತಿಯ ಪರಮೇಶ್ ಕೂತಿ, ತಾಲೂಕು ಸಮಿತಿಯ ಸಿ.ಎಸ್. ನಾಗರಾಜ್, ಮಾಜಿ ಶಾಸಕ ಅಪ್ಪಚ್ಚುರಂಜನ್ ಹಾಗೂ ಇತರರು ಪಾಲ್ಗೊಂಡಿದ್ದರು.