ಮಡಿಕೇರಿ, ಸೆ. ೪: ಪ್ರಸಕ್ತ(೨೦೨೪-೨೫) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ತಿಳಿಸಿದ್ದಾರೆ.

ಈ ಸಂಬAಧ ತಾ.೫ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಅವರು ಕೋರಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೋಮವಾರಪೇಟೆ ತಾಲೂಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್. ರಾಮೇಗೌಡ, ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್. ವಾಸುವರ್ಮ, ಮಡಿಕೇರಿ ತಾಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ. ಚೈತ್ರ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್. ಸುನೀತ, ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ.ಎಸ್. ಜಾನ್ಸಿ, ಮಡಿಕೇರಿ ಕೆ.ಪಿ. ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಿ.ಕೆ. ಗಂಗಮ್ಮ.

ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರಪೇಟೆ ತಾಲೂಕಿನ ಗೌಡಳ್ಳಿಯ ಗೌಡಳ್ಳಿ ಪ್ರೌಢಶಾಲೆಯ ಎಸ್.ಎನ್. ಪೂವಯ್ಯ, ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಪ್ರೌಢಶಾಲೆಯ ಕೆ.ಡಿ. ಕವಿತ, ಮಡಿಕೇರಿ ತಾಲೂಕಿನ ಚೇರಂಬಾಣೆ ಅರುಣ ಅನುದಾನಿತ ಪ್ರೌಢಶಾಲೆಯ ಸಿ.ಆರ್. ಲೋಕೇಶ್, ಮಡಿಕೇರಿ ತಾಲೂಕಿನ ಭಾಗಮಂಡಲ ಜ್ಞಾನೋದಯ ಶಾಲೆಯ ಶ್ವೇತನ್ ಚಂಗಪ್ಪ, ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಜೆ.ಸಿ. ಶಾಲೆಯ ಎನ್.ಬಿ. ಸತೀಶ್, ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಶ್ರೀ ಸದಾಶಿವ ಸ್ವಾಮೀಜಿ ಶಾಲೆಯ ಕೆ.ಎಸ್. ತನುಜ.

ಅನುದಾನರಹಿತ ಶಾಲೆಗಳ ವಿಭಾಗದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮಡಿಕೇರಿ ತಾಲೂಕಿನ ಶ್ರೀರಾಜೇಶ್ವರಿ ವಿದ್ಯಾಲಯದ ಬಿ.ಎ. ಪಾರ್ವತಿ, ವೀರಾಜಪೇಟೆ ತಾಲೂಕಿನ ಪ್ರಗತಿ ಶಾಲೆಯ ಎ.ಎನ್. ರೇಖಾ, ಸೋಮವಾರಪೇಟೆ ತಾಲೂಕಿನ ಚೌಡ್ಲು ಸಾಂದೀಪನಿ ಶಾಲೆಯ ವಸಂತ ಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.