ಕೂಡಿಗೆ, ಸೆ. ೪: ಕೂಡಿಗೆಯ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ, ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ, ಯಂಗ್ ಸ್ಟಾರ್ ಅಸೋಸಿಯೇಷನ್ ಅವರ ವತಿಯಿಂದ ೧೬ನೇ ವರ್ಷದ ಗೌರಿ ಗಣೇಶೋತ್ಸವ ಆಚರಣೆ ನಡೆಯಲಿದೆ.

ತಾ. ೭ರ ಶನಿವಾರ ಬೆಳಿಗ್ಗೆ ೬ ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಂತರ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಎಸ್. ಎಸ್. ರಕ್ಷಿತ್ ಕುಮಾರ್ ತಿಳಿಸಿದ್ದಾರೆ.

ಆಚರಣೆಯ ಅಂಗವಾಗಿ ಸಂಜೆ ೭ ಗಂಟೆಗೆ ಆರ್ಕೆಸ್ಟಾç ಕಾರ್ಯಕ್ರಮ, ೮ ಗಂಟೆಗೆ ಡ್ಯಾನ್ಸ್ ಕಾರ್ಯಕ್ರಮ ನಡೆಯಲಿದೆ. ವಿಸರ್ಜನೆ ದಿನದಂದು ಅನ್ನಸಂರ್ತಣೆ, ಡಿ.ಜೆ. ವಾದ್ಯಗೋಷ್ಠಿ, ಹುಲಿಕುಣಿತ, ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ನಂತರ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಮೂರ್ತಿ ವಿಸರ್ಜನೆ ಮಾಡಲಾಗುವುದು ಎಂದು ಕಾರ್ಯದರ್ಶಿ ಡಿ. ಉಮೇಶ್ ತಿಳಿಸಿದ್ದಾರೆ.