ಸೋಮವಾರಪೇಟೆ, ಸೆ. ೪: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಮ್ಮನ ಕೆರೆಯಲ್ಲಿ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮ ತಾ.೬ರಂದು (ನಾಳೆ) ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಡಿ.ಎ. ಉದಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶ್ರೀ ಸಿದ್ಧೇಶ್ವರ ಮತ್ತು ಶೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಶ್ರೀ ಗೌರಿ ಹಬ್ಬದಂದು ಬೆಳಿಗ್ಗೆ ೯ ರಿಂದ ೧೦.೩೦ ಗಂಟೆಯವರೆಗೆ ಹೊನ್ನಮ್ಮನ ಕುಟುಂಬಸ್ಥರು ಬಾಗಿನ ಅರ್ಪಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್. ಸುರೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.

ಅAದು ದೇವಾಲಯ ಆವರಣದಲ್ಲಿ ಜಾತ್ರೋತ್ಸವ ನಡೆಯಲಿದ್ದು, ಹೊನ್ನಮ್ಮನ ಕೆರೆಯಲ್ಲಿ ಬೋಟ್ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನದಾನ ವ್ಯವಸ್ಥೆಯಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಟ್ರಸ್ಟ್ನ ಉಪಾಧ್ಯಕ್ಷ ಡಿ.ಬಿ. ಲೋಕೇಶ್ ಬೆಳ್ಳಿಯಪ್ಪ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಕವನ್, ನಿರ್ದೇಶಕರುಗಳಾದ ಡಿ.ಪಿ. ವಿನಯ ಕುಮಾರ್ ಹಾಗೂ ಡಿ.ಟಿ. ಭರತ್ ಉಪಸ್ಥಿತರಿದ್ದರು.