ಸಿದ್ದಾಪುರ, ಸೆ. ೪: ಸಿದ್ದಾಪುರ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಂ.ಎಚ್. ಮೂಸಾ ಹೃದಯಾ ಘಾತದಿಂದ ನಿಧನರಾದರು. ಇವರು ಉತ್ತಮ ಕಬಡ್ಡಿಪಟುವಾಗಿದ್ದು, ಸಿದ್ದಾಪುರ ವಿ ಸೆವೆನ್ ಯುವಕ ಸಂಘದ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡ ಇವರು ಮಾಜಿ ವಲಯ ಅಧ್ಯಕ್ಷರಾಗಿ ಹಾಗೂ ಹಾಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರಾಗಿದ್ದರು.

ಮೃತರು ಮೂವರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಕಾಂಗ್ರೆಸ್ ಮುಖಂಡರಾದ ಮೂಸಾ ಅವರ ಅಂತಿಮ ದರ್ಶನಕ್ಕೆ ನಿವಾಸಕ್ಕೆ ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಟಿ.ಪಿ.ರಮೇಶ್, ರಂಜಿ ಪೂಣಚ್ಚ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಎಂ.ಎಚ್. ಮೂಸಾ ಅವರು ನಿಧನರಾದ ಹಿನ್ನೆಲೆಯಲ್ಲಿ ಸಿದ್ದಾಪುರ ನಗರದ ವರ್ತಕರು ಕೆಲವು ಸಮಯ ಅಂಗಡಿಗಳನ್ನು ಮುಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು.