ಮಡಿಕೇರಿ, ಸೆ. ೫: ಪ್ರಸಕ್ತ (೨೦೨೪-೨೫) ಸಾಲಿನ ದೀನದಯಾಳ ಅಂತ್ಯೋದಯ ಯೋಜನೆ ನಲ್ಮ್ ರಾಷ್ಟಿçÃಯ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯಮಶೀಲತೆ ಮತ್ತು ಎಸ್‌ಎಚ್ ಜಿ ಗುಂಪು ರಚನೆಗಾಗಿ ಮಡಿಕೇರಿ ನಗರ ಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಉದ್ದೇಶಿಸಿರುವ ಚಟುವಟಿಕೆಯ ಬಗ್ಗೆ ಅನುಭವ ಹೊಂದಿದ್ದರೆ/ ತರಬೇತಿ ಪಡೆದಿದ್ದರೆ ಪ್ರಮಾಣ ಪತ್ರ, ಯೋಜನಾ ವರದಿ, ಬಿಪಿಎಲ್ ಪಡಿತರ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ವೈಯಕ್ತಿಕ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ, ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೂ.೨೦ ಛಾಪಾ ಕಾಗದದ ಮೇಲೆ ನಲ್ಮ್ ಯೋಜನೆಯ ಪೋಷಣ ಪ್ರಮಾಣ ಪತ್ರ ನೋಟರಿಯಿಂದ ದೃಢೀಕರಿಸಿದ ಪ್ರತಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೨೦ ಕೊನೆಯ ದಿನವಾಗಿದೆ. ನಂತರ ಬಂದAತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಸೂಚನೆ: ಮುಂದೆ ಹಾಜರುಪಡಿಸಬಹುದಾದಂತಹ ಅಗತ್ಯ ದಾಖಲಾತಿಗಳನ್ನು ಒದಗಿಸುವ ಷರತ್ತಿಗೆ ಕಡ್ಡಾಯವಾಗಿ ಒಳಪಡಿಸಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.