ಮಡಿಕೇರಿ, ಸೆ. ೫: ರಾಜ್ಯವು ‘ಕರ್ನಾಟಕ’ ಎಂದು ನಾಮಕರಣಗೊಂಡು ೫೦ ವರ್ಷಗಳು ತುಂಬಿವೆ. ಆ ಪ್ರಯುಕ್ತ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಡಿನ ಬಹುಸಂಸ್ಕೃತಿಯನ್ನು ಸಾರುವ ‘ಕರ್ನಾಟಕ ಸುವರ್ಣ ಸಂಭ್ರಮ-೫೦ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ತಾ. ೨೪ ಮತ್ತು ೨೫ ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ.

ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ರಾಜ್ಯ ವಿಧಾನಸಭೆಯ ಅಧ್ಯಕ್ಷರು(ಸ್ಪೀಕರ್), ಮೂರು ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಇಲಾಖಾಧಿಕಾರಿಗಳು, ಗಣ್ಯರು ಸೇರಿದಂತೆ ಇಡೀ ಎರಡು ದಿನದ ಕಾರ್ಯಕ್ರಮಕ್ಕೆ ಮೆರಗು ನೀಡಲಿದ್ದಾರೆ.

ಈ ಸಂಬAಧ ಕೊಡಗಿನಲ್ಲಿ ಕೆಲವೊಂದು ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾಯ ಜಿಲ್ಲೆಗಳಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು. ಇದೀಗ ಕೊಡಗಿನಲ್ಲಿ ಪ್ರೌಡಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದು ಪ್ರಥಮ ಬಹುಮಾನ ರೂ.೩೦೦೦ ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.೨೦೦೦ ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ.೧೦೦೦ ಹಾಗೂ ಪ್ರಮಾಣ ಪತ್ರ ಕೊಡಲಾಗುವುದು. ಚಿತ್ರಕಲಾ ಸ್ಪರ್ಧೆಯಲ್ಲಿ ಒಂದು ಶಾಲೆಯಿಂದ ಗರಿಷ್ಠ ಮೂವರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಸ್ಪರ್ಧೆಯಲ್ಲಿ ಪ್ರೌಢಶಾಲೆಯ ೮ನೇ, ೯ನೇ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಚಿತ್ರ ಬಿಡಿಸಲು ಎ೩ ಅಳತೆಯ ಡ್ರಾಯಿಂಗ್ ಶೀಟ್‌ನ್ನು ಅಕಾಡೆಮಿಗಳ ವತಿಯಿಂದ ನೀಡಲಾಗುವುದು.

ಚಿತ್ರ ಬಿಡಿಸಲು ಬೇಕಾದ ಪರಿಕರಗಳನ್ನು ವಿದ್ಯಾರ್ಥಿಗಳೇ ತರಬೇಕು. ಪೆನ್ಸಿಲ್ ಶೇಡಿಂಗ್, ಕ್ರಯಾನ್, ಬಣ್ಣದ ಪೆನ್ಸಿಲ್, ಸ್ಕೆಚ್ ಪೆನ್ ಮತ್ತು ವಾಟರ್ ಕಲರ್ ಪೈಕಿ ಯಾವುದಾದರೂ ಒಂದು ಮಾಧ್ಯಮದಲ್ಲಿ ಚಿತ್ರ ರಚಿಸಬಹುದಾಗಿದೆ. ಚಿತ್ರ ಬಿಡಿಸಲು ಗರಿಷ್ಠ ೯೦ ನಿಮಿಷಗಳ ಕಾಲಾವಕಾಶ ನಿಗಧಿ ಪಡಿಸಲಾಗಿದೆ. ಚಿತ್ರಕಲಾ ಸ್ಪರ್ಧೆಯ ವಿಷಯ ‘ಕೊಡಗಿನ ಬಹುಸಂಸ್ಕೃತಿ ಪರಂಪರೆ’.

ಕೊಡಗಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. “ಕರ್ನಾಟಕ ಬಹುಸಂಸ್ಕೃತಿ ಪರಂಪರೆಗೆ ಕೊಡಗಿನ ಕೊಡುಗೆ, ಹಾಗೂ ಇಂದಿನ ಸವಾಲುಗಳು” ವಿಷಯವಾಗಿ ಒಂದು ಕಾಲೇಜಿನಿಂದ ಕನಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶ ಕೊಡಲಾಗುವುದು. ಭಾಷಣವು ೧೦ ನಿಮಿಷಗಳಿಗೆ ಮೀರಬಾರದು. ಭಾಷೆ ಕನ್ನಡ ಮಾತ್ರ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಪ್ರಥಮ ಬಹುಮಾನ ರೂ.೩೦೦೦ ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.೨೦೦೦ ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ.೧೦೦೦ ನಗದು ಮತ್ತು ಪ್ರಮಾಣ ಪತ್ರ.

ಭಾಷಣ ಸ್ಪರ್ಧೆಯನ್ನು ಮೊದಲು ಆಯಾಯ ತಾಲೂಕು ಮಟ್ಟದಲ್ಲಿ ನಡೆಸಲಾಗುವುದು. ಇದಕ್ಕೆ ಸಂಬAಧಿಸಿದAತೆ ಆಯಾಯ ತಾಲೂಕು ಕೇಂದ್ರದಲ್ಲಿ ಇಲಾಖಾ ವತಿಯಿಂದ ನಿಗಧಿ ಪಡಿಸುವ ವಿದ್ಯಾ ಸಂಸ್ಥೆಯಲ್ಲಿ ಸ್ಪರ್ಧೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲಾಗುವುದು. ಜಿಲ್ಲಾ ಮಟ್ಟದ ಸ್ಪರ್ಧೆಯ ಸ್ಥಳವನ್ನು ಮುಂದೆ ತಿಳಿಸಲಾಗುವುದು. ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಿರುಚಿತ್ರ ಹಾಗೂ ಸಮೂಹ ಗಾನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರ ಸ್ಪರ್ಧೆಗೆ ಆಯಾಯ ಪದವಿ ಹಾಗೂ ಸ್ನಾತಕೋತ್ತರ ಕಾಲೇಜಿನಿಂದ ಕನಿಷ್ಟ ಇಬ್ಬರು ವಿದ್ಯಾರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದು.

ಕಿರುಚಿತ್ರವು: “ಕೊಡಗಿನ ಬಹುಸಂಸ್ಕೃತಿ ಪರಂಪರೆ”ಯನ್ನು ಪ್ರತಿಬಿಂಬಿಸುವAತಿರಬೇಕು. ವಿಜೇತರಿಗೆ ಪ್ರಥಮ ಬಹುಮಾನ ರೂ. ೧೦,೦೦೦ ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ. ೫೦೦೦ ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ. ೩೦೦೦ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಕಿರುಚಿತ್ರವು ೫ ನಿಮಿಷಗಳಿಗೆ ಮೀರಬಾರದು. ಭಾಷೆ ಕನ್ನಡ ಮಾತ್ರ. ಸ್ಪರ್ಧೆಗೆ ಕಿರುಚಿತ್ರ ಕಳುಹಿಸಿಕೊಡುವವರು ಞoಜಚಿvಚಿಚಿಛಿಚಿಜemಥಿ@gmಚಿiಟ.ಛಿom, ಚಿಡಿebಚಿseಚಿಛಿಚಿಜemಥಿ@gmಚಿiಟ.ಛಿom ಅಥವಾ ಪೆನ್ ಡ್ರೆöÊವ್ ಮೂಲಕ ಅಧ್ಯಕ್ಷರು / ರಿಜಿಸ್ಟಾçರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌAಡ್ ಹತ್ತಿರ ಮಡಿಕೇರಿ ಮತ್ತು ಅಧ್ಯಕ್ಷರು / ರಿಜಿಸ್ಟಾçರ್, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ, ಕಾಫಿ ಕೃಪ ಕಟ್ಟಡ ರಾಜಸೀಟು ರಸ್ತೆ, ಮಡಿಕೇರಿ. ಇಲ್ಲಿಗೆ ಕಳುಹಿಸಿಕೊಡುವುದು. ಕಿರುಚಿತ್ರ ತಯಾರಿಸಿದ ವಿದ್ಯಾರ್ಥಿಗಳ ಹೆಸರನ್ನು ಸಹಿ ಮತ್ತು ಮೊಹರಿನೊಂದಿಗೆ ಪ್ರಾಂಶುಪಾಲರು ದೃಡೀಕರಿಸತಕ್ಕದ್ದು.

ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗುವ ಸಮೂಹಗಾನ ಸ್ಪರ್ಧೆಗೆ ಪ್ರತಿ ತಂಡದಲ್ಲಿ ೬ ಜನ ಸ್ಪರ್ಧಿಗಳಿರಬೇಕು. ‘ಕನ್ನಡದ ಮಹತ್ವ ಸಾರುವ’ ಹಾಡುಗಳಾಗಿರಬೇಕು. ಸಂಗೀತದ ಪರಿಕರಗಳನ್ನು ಬಳಸುವಂತಿಲ್ಲ. ಶ್ರುತಿ ಪೆಟ್ಟಿಗೆ ಬಳಸಲು ಅವಕಾಶವಿರುತ್ತದೆ. ಸಮೂಹಗಾನದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.೫೦೦೦ ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.೩೦೦೦ ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ೨೦೦೦ ನಗದು ಮತ್ತು ಪ್ರಮಾಣ ಪತ್ರ ನೀಡಲಾಗುವುದು.

ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ ೮೬೬೦೪೬೧೪೪೨, ೯೭೪೧೫೨೧೧೯೭, ೯೫೩೫೬೧೫೭೫೯ ಅನ್ನು ಸಂರ್ಪಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.