ಸೋಮವಾರಪೇಟೆ, ಸೆ. ೫: ಶನಿವಾರಸಂತೆ ಸಮೀಪದ ಚಂಗಡಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಶನಿವಾರಸಂತೆ ಪಟ್ಟಣದ ಪತ್ರಿಕಾ ವಿತರಕ ಕೆ.ಎನ್. ಕುಮಾರಸ್ವಾಮಿ ಅವರನ್ನು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಲಾಯಿತು.

ಪಟ್ಟಣದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಪತ್ರಿಕಾ ವಿತರಕ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್, ಪತ್ರಿಕೆ ಮತ್ತು ಪತ್ರಿಕಾ ವಿತರಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಂದಕ್ಕೊAದು ಅವಿನಾಭಾವ ಸಂಬAಧ ಇದೆ ಎಂದರು.

ಪತ್ರಿಕಾ ವಿತರಕರು ಸಾಕಷ್ಟು ಸಮಸ್ಯೆಗಳ ನಡುವೆ ಎಲ್ಲಾ ಕಾಲದಲ್ಲಿಯೂ ಮನೆ ಮನೆಗೆ ತೆರಳಿ ಪತ್ರಿಕೆ ವಿತರಿಸುವ ಮೂಲಕ ಪತ್ರಿಕೆಗಳ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಯಾವುದೇ ಕೆಲಸವನ್ನಾದರೂ ಶ್ರಮ ವಹಿಸಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದರು.

ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ, ಪತ್ರಿಕೆ ಮತ್ತು ಜನರ ನಡುವೆ ಕೆಲಸ ಮಾಡಿದ ಸಾಕಷ್ಟು ಮಂದಿ ಉತ್ತುಂಗದ ಸ್ಥಾನಕ್ಕೇರಿದ್ದಾರೆ. ಪತ್ರಿಕೆ ಜ್ಞಾನ ಸಂಪಾದನೆಗೆ ದಾರಿಯಾಗಿದ್ದು, ಹಣದೊಂದಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಲಿದೆ ಎಂದರು.

ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಕಾರ್ಯದರ್ಶಿ ಡಿ.ಪಿ. ಲೋಕೇಶ್, ಸಹ ಕಾರ್ಯದರ್ಶಿ ಹೋಮೇಶ್ ಮಣಗಲಿ, ಖಜಾಂಚಿ ದುಷ್ಯಂತ್, ನಿರ್ದೇಶಕರುಗಳಾದ ಜಯಪ್ಪ ಹಾನಗಲ್ಲು, ಟೋಮಿ ಥಾಮಸ್, ಎಸ್.ಆರ್. ವಸಂತ್, ಸುಕುಮಾರ್, ಜೈನುದ್ದೀನ್, ಕುಶಾಲನಗರ ಸಂಘದ ಕಾರ್ಯದರ್ಶಿ ವಿನ್ಸೆಂಟ್ ಇದ್ದರು.