*ಗೋಣಿಕೊಪ್ಪ, ಸೆ. ೫: ವೀರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ ಸದಸ್ಯತ್ವ ಅಭಿಯಾನ ಕಾರ್ಯಗಾರದಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಪದಾಧಿ ಕಾರಿಗಳನ್ನು ಸನ್ಮಾನಿಸಲಾಯಿತು.

ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕೊಡಂದೇರ ಬಾಂಡ್ ಗಣಪತಿ, ಕುಂಞAಗಡ ಅರುಣ್ ಭೀಮಯ್ಯ, ಗುಮ್ಮಟೀರ ಕಿಲನ್ ಗಣಪತಿ, ಹೊಟ್ಟೆಂಗಡ ರಮೇಶ್ ಇವರುಗಳನ್ನು ಭಾರತೀಯ ಜನತಾ ಪಾರ್ಟಿ ವೀರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆಜಿ ಬೋಪಯ್ಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜುಗಣಪತಿ, ತಾಲೂಕು ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ ಸೇರಿದಂತೆ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇದ್ದರು.