ವೀರಾಜಪೇಟೆ, ಸೆ. ೫: ಕೂರ್ಗ್ಮಾರ್ಕ್ಸ್ಮೆನ್ ವೀರಾಜಪೇಟೆ ಇವರ ವತಿಯಿಂದ ೧೦ನೇ ವರ್ಷದ ಕೈಲ್‌ಪೊಳ್ದ್ ಹಬ್ಬದ ಪ್ರಯುಕ್ತ ತಾ. ೩ ರಂದು ನಡೆಯಬೇಕಾಗಿದ್ದ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆಯನ್ನು ಮಳೆಯ ಕಾರಣದಿಂದ ಮುಂದೂಡಲಾಗಿತ್ತು.

ಇದೀಗ ತಾ. ೭ ರಂದು ಬೆಳಿಗ್ಗೆ ೯.೩೦ ಗಂಟೆಗೆ ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಮುಕ್ಕಾಟಿರ ಕಾರ್ಯಪ್ಪ ಹಾಗೂ ಕಾರ್ಯದರ್ಶಿ ಸಂಪಿ ಪೂಣಚ್ಚ ತಿಳಿಸಿದ್ದಾರೆ. ವಿವರಗಳಿಗಾಗಿ ಮೊ. ೮೩೧೭೩೯೭೧೮೪ ಸಂಪರ್ಕಿಸಬಹುದು.