ಮಡಿಕೇರಿ, ಸೆ. ೫: ಹೊದ್ದೂರು ಗ್ರಾಮದ ಶ್ರೀ ಪ್ರಸನ್ನ ಗಣಪತಿ ಸಂಘದ ಆಶ್ರಯದಲ್ಲಿ ತಾ. ೭ ರಂದು ಗಣೇಶ ಚತುರ್ಥಿ ಪ್ರಯುಕ್ತ ೧೮ನೇ ವರ್ಷದ ಗೌರಿ ಗಣೇಶೋತ್ಸವ ಆಚರಣೆ ನಡೆಯಲಿದೆ. ಶ್ರೀ ಶಾಸ್ತ - ಈಶ್ವರ ದೇವಾಲಯದ ಆವರಣದಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಗಣಪತಿ ಹೋಮ, ಗೌರಿ - ಗಣೇಶನ ಮೂರ್ತಿ ಪ್ರತಿಷ್ಠಾಪನೆ, ವಿವಿಧ ಪೂಜಾ ಕಾರ್ಯ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಬಳಿಕ ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.

ಮಧ್ಯಾಹ್ನ ೨ ಗಂಟೆಯ ನಂತರ ಅಲಂಕೃತ ಮಂಟಪದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಬಳಿಕ ಬಾಗಿನ ಅರ್ಪಣೆಯೊಂದಿಗೆ ಬಲಮುರಿಯ ಕಾವೇರಿ ಹೊಳೆಯಲ್ಲಿ ವಿಸರ್ಜಿಸಲಾಗುವುದು.