ಮಡಿಕೇರಿ, ಸೆ. ೬ : ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಲ್ಲಿ ಈಗಾಗಲೇ ಭೇಟಿ ಮಾಡಿ ಮನವಿ ಮಾಡಲಾಗಿದೆ.

ಮಡಿಕೇರಿ ದಸರಾವು ಈ ಹಿಂದಿನAತೆ ವಿವಿಧ ಸಮಿತಿಗಳ ನೇತೃತ್ವದಲ್ಲಿ ನಡೆಯಲಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶೀಘ್ರ ಸಭೆ ನಡೆಯಲಿದೆ ಎಂದು ಡಾ. ಮಂತರ್ ಗೌಡ ತಿಳಿಸಿದರು.

ಸೋಮವಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಗೂ ಹಾಗೂ ಸಿಬ್ಬಂದಿಗಳ ವೇತನಕ್ಕೂ ಯಾವುದೇ ಸಂಬAಧವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗಿವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಇತರ ಪ್ರಗತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.