ಮಡಿಕೇರಿ, ಸೆ. ೬: ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಹಾಗೂ ಮಕ್ಕಳ ಛದ್ಮವೇಷ ಸಂಭ್ರಮದಿAದ ನಡೆಯಿತು.

ಮೊಸರು ಕುಡಿಕೆ ಒಡೆಯುವ ಸ್ಪರ್ಧಿಗಳಾಗಿ ಸಂತೋಷ್ ಬಲರಾಮ್ ಹಾಗೂ ಮಹೇಶ್ ರಾಮು ಭಾಗವಹಿಸಿದ್ದರು.

ಸ್ಪರ್ಧೆಗೂ ಮುನ್ನ ದೇವಾಲಯದಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ನಂತರ ಇಬ್ಬರು ಯುವಕರು ಮೊಸರು ಕುಡಿಕೆ ಒಡೆಯಲು ಮುಂದಾದರು. ಯುವಕರು ನೀರಿನೇಟನ್ನು ಲೆಕ್ಕಿಸದೆ ವಾದ್ಯಕ್ಕೆ ಸರಿಯಾಗಿ ಹೆಜ್ಜೆ ಹಾಕುತ್ತಾ ಮೊಸರು ಕುಡಿಕೆ ಓಡೆಯುವಲ್ಲಿ ಯಶಸ್ವಿಯಾದರು. ವಿಜೇತರಾದ ಸ್ಪರ್ಧಿಗಳಿಗೆ ದೇವಾಲಯದಲ್ಲಿ ಸಾಂಪ್ರದಾಯಿಕ ಬಹುಮಾನ ನೀಡಿ ಗೌರವಿಸಲಾಯಿತು.

ಛದ್ಮವೇಷ ಸ್ಪರ್ಧೆ: ಮೊಸರು ಕುಡಿಕೆ ಸ್ಪರ್ಧೆಯ ನಂತರ ಮಕ್ಕಳಿಗೆ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ, ರಾಧೆಯರ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಆಯುಷ್ ಎಸ್. ರೈ, ದ್ವಿತೀಯ ಬ್ರಿಯಾ ಹಾಗೂ ಜಿ.ಎಂ. ಮನ್ವಿತ್ ತೃತೀಯ ಬಹುಮಾನವನ್ನು ಪಡೆದುಕೊಂಡರು.