ಮಡಿಕೇರಿ, ಸೆ. ೬ : ಪ್ರಸಕ್ತ (೨೦೨೪-೨೫) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. ೧೪ ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ತಿತಿತಿ.uಚಿhs.eಜu.iಟಿ ವೆಬ್‌ಸೈಟ್‌ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ತಾ. ೧೪ ರೊಳಗೆ ಸಲ್ಲಿಸಬಹುದಾಗಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.೪೫ (ಕನಿಷ್ಟ ಶೇ. ೪೦ ಪ.ಜಾ ಮತ್ತು ಪ.ಪಂ. / ಪ್ರವರ್ಗ-೧) ಅಂಕಗಳೊAದಿಗೆ ಉತ್ತಿರ್ಣರಾದ, ೧೯ ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. ೫೦ ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನುಕೃಷಿ ಹೀಗೆ ಕೃಷಿಗೆ ಸಂಬAಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ತಿಳಿಸಿದ್ದಾರೆ.