ಭಾಗಮಂಡಲ, ಅ. ೯: ಕಾವೇರಿ ಆಟೋ ಚಾಲಕರ ಸಂಘದ ವತಿಯಿಂದ ೨೧ನೇ ವರ್ಷದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಭಾಗಮಂಡಲ ಜಂಕ್ಷನ್‌ನಿAದ ಮಾರುಕಟ್ಟೆ ಬಳಿಯವರೆಗೆ ಆಟೋ ಚಾಲಕರ ಸಂಘದ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡರು.

ಭಾಗಮAಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾಗಮಂಡಲದಲ್ಲಿ ಪ್ರವಾಸಿಗರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯವನ್ನು ಪ್ರತಿನಿತ್ಯ ಕೈಗೊಳ್ಳಲಾಗುತ್ತಿದೆ.

ಧಾರ್ಮಿಕ ತಾಣಗಳ ಸ್ವಚ್ಛತಾ ಕಾರ್ಯ ಪ್ರತಿನಿತ್ಯ ಆಗಬೇಕು. ಇದಕ್ಕಾಗಿ ಗ್ರಾಮ ಪಂಚಾಯಿತಿ ಸನ್ನದ್ಧವಾಗಿದೆ. ಭಾಗಮಂಡಲದ ಆಟೋ ಚಾಲಕರ ಸಂಘವು ಪ್ರತಿವರ್ಷ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಆಟೋ ಚಾಲಕರ ಸಂಘದ ಅಧ್ಯಕ್ಷ ಬೋಳನ ಪ್ರಸಾದ್, ಕಾರ್ಯದರ್ಶಿ ದೇವಂಗೋಡಿ ಸಂತು, ಉಪಾಧ್ಯಕ್ಷ ಕುಲದೀಪ್ ಸೇರಿದಂತೆ ಸಂಘದ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.