ಮಡಿಕೇರಿ, ಅ. ೯: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತç ಶಸ್ತçಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತಿçà ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.

ಶಿಬಿರದಲ್ಲಿ ಸುಮಾರು ೧೮೦ ಕ್ಕಿಂತ ಹೆಚ್ಚು ಹೊರ ರೋಗಿಗಳ ತಪಾಸಣೆ, ೧೬ ಯುಡಿಐಡಿ ಕಾರ್ಡ್ಗಳು, ೧೦೦ ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ ಶಿಫಾರಸು ಮಾಡಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಶಸ್ತç ಚಿಕಿತ್ಸಕ ಡಾ.ನಂಜುAಡಯ್ಯ ಅವರು ಉದ್ಘಾಟಿಸಿ ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ನಮ್ಮ ಗುರಿ ಹಾಗೂ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಶಿಬಿರದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ಗಳ ನೋಂದಣಿ, ಉಚಿತ ಯುಡಿಐಡಿ ನೋಂದಣಿ, ದೇಹದಾನ, ನೇತ್ರದಾನ, ಅಂಗಾAಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಮಾರಂಭದಲ್ಲಿ ಡಾ ಸತೀಶ್ ಹಾಗೂ ತಂಡ, ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಾಲಚಂದ್ರ ನಾಯರ್, ವೈದ್ಯಕೀಯ ಕಾಲೇಜಿನ ಡಾ ನರಸಿಂಹ.ಬಿ.ಸಿ ಕರಿಕೆ ವೈದ್ಯಾಧಿಕಾರಿ ಡಾ. ಪುಂಡಲಿಕ್, ವೈದ್ಯಕೀಯ ಕಾಲೇಜಿನ ವೈದ್ಯರು ಉಪಸ್ಥಿತರಿದ್ದರು.