ಮಡಿಕೇರಿ, ಅ. ೯: ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ತಾ. ೧೧ ರ ಆಯುಧ ಪೂಜಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಡಿಕೇರಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ದಸರಾ ಸಮಿತಿ ಪ್ರಮುಖರು ಬೆಂಗಳೂರಿಗೆ ತೆರಳಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿದರು.

ಕಾರ್ಯಕ್ರಮಕ್ಕೆ ಬರಲು ಡಿ.ಕೆ. ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಮುಖರು ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜು ತಂಗಡಗಿ ಅವರನ್ನು ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಮುಖರು ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜು ತಂಗಡಗಿ ಅವರನ್ನು ಆಹ್ವಾನಿಸಲಾಗಿದೆ.

ತಾ. ೧೦ ರ (ಇಂದು) ಯುವ ದಸರಾಕ್ಕೆ ಅತಿಥಿಯಾಗಿ ಪಾಲ್ಗೊಳ್ಳು ವಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಆಹ್ವಾನಿಸಲಾಗಿದೆ.

ಭೇಟಿ ಸಂದರ್ಭ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ, ಸಮಿತಿ ಪ್ರಮುಖರಾದ ಸತೀಶ ಪೈ, ಲೋಕೇಶ್, ಪೌರಾಯುಕ್ತ ರಮೇಶ್ ಹಾಜರಿದ್ದರು.