ಕರಿಕೆ, ಅ. ೯: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಭಾಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಚೆತ್ತುಕಾಯದಿಂದ ಚೆಂಬೇರಿ ತನಕ ರಸ್ತೆ ಬದಿಯ ಪ್ಲಾಸ್ಟಿಕ್, ಬಾಟಲಿ ಸೇರಿದಂತೆ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ರಸ್ತೆ ಬದಿಯನ್ನು ಸ್ವಚ್ಛತೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ನಾಯರ್ ಎನ್., ಪಂಚಾಯಿತಿ ಸದಸ್ಯ ಕೆ.ಎ. ನಾರಾಯಣ, ಪಂಚಾಯಿತಿ ಆಡಳಿತ ಅಧಿಕಾರಿ ಗಣಪತಿ ಪಿ.ಪಿ., ಸಿಬ್ಬಂದಿ ವರ್ಗ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯವರು, ಸ್ವ ಸಹಾಯ ಸಂಘದ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು. ಪ್ರತಿಜ್ಞಾವಿಧಿ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.