ಕಣಿವೆ, ಅ. ೯ : ಚೇಂಬರ್ ಆಪ್ ಕಾಮರ್ಸ್ ಕುಶಾಲನಗರ ಸ್ಥಾನೀಯ ಸಮಿತಿ ನೂತನ ಅಧ್ಯಕ್ಷರಾಗಿ ಪಟ್ಟಣದ ಕೆ.ಎಸ್.ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ರವೀಂದ್ರ ರೈ ಅವರು ಸಂಘಕ್ಕೆ ರಾಜೀನಾಮೆ ನೀಡಿದ ನಂತರ ತೆರವಾಗಿದ್ದ ಸ್ಥಾನಕ್ಕೆ ನಾಗೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.