ಸುಂಟಿಕೊಪ್ಪ, ಅ. ೮: ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಬಹುತೇಕ ಭಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರದAದು ಪನ್ಯದ ಸಂದೇಶ್ ಎಂಬವರಿಗೆ ಸೇರಿದ ಮಾರಿಗುಡಿಯ ಸಮೀಪದ ಕಾಫಿ ತೋಟದಲ್ಲಿ ಅಂದಾಜು ೪೫ ರಿಂದ ೫೦ ವಯಸ್ಸಿನ ಪುರುಷನ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ೧ ಕಾಲು, ದೇಹದ ಕೆಲ ಭಾಗಗಳು ಸ್ಥಳದಲ್ಲಿ ಕಂಡುಬAದಿದೆ. ಇಂದೊAದು ಕೊಲೆ ಎಂದು ಮೇಲ್ನೋಟಕ್ಕೆ ಕಂಡುಬAದಿದ್ದು, ೪-೫ ದಿನಗಳ ಹಿಂದೆ ಘಟನೆ ನಡೆದಿರಬಹುದು. ಆರೋಪಿಗಳ ಪತ್ತೆಗೆ ತನಿಖಾ ತಂಡ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು, ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಘಟನಾ ಸ್ಥಳಕ್ಕೆ ಭೇಟಿ

(ಮೊದಲ ಪುಟದಿಂದ) ನೀಡಿದ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ವಿಶ್ವಾಸ ವ್ಯಕ್ತಪಡಿಸಿದರು. ತೋಟದ ಮಾಲೀಕರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ತಿಳಿಸಿದ ಮೇರೆ ಮಾಹಿತಿ ಪಡೆದ ತಕ್ಷಣ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್‌ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.