ಮಡಿಕೇರಿ, ಅ. ೧೦: ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟಿçÃಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್‌ಇ. ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯ, #೧೦೪೦, ೨೮ನೇ ಕ್ರಾಸ್ ರಸ್ತೆ, ೨ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-೧೦, ಇಲ್ಲಿ ತಾ. ೨೦ ರಂದು ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪೆನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು hಣಣಠಿs://ರಿobಜಿಚಿiಡಿ.ಛಿಚಿಟiಛಿuಣ. ಟಿieಟiಣ.iಟಿ/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವAತೆ ಕೊಡಗು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೋರಿದ್ದಾರೆ.